ನಮ್ಮ ಬಾಪೂ

ಒಂದೆ ಹಿಡಿಮೂಳೆ ಚಕ್ಕಳ ಅಷ್ಟೆ; ಅದಕೆ ಸುರಿ
ಮೂರುನಾಲ್ಕೋ ಚಮಚ ರಕ್ತ, ಮಾಂಸ, ಜೊತೆಗಿರಿಸು
ವಾಪವಂ ನೆರೆತೆರೆದ ಕಡಲಿನಾಳದ ಮನಸ,
ನೆರೆಬಂದ ಕಡಲಿನೊಲ್ ಪ್ರೇಮವಂ ತುಂಬಿದೆದೆಯ;
ಹುಚ್ಚು- ಮೊರಕಿವಿಯೆರಡ, ಎರಡು ಪಿಳಿಪಿಳಿ ಕಣ್ಣ;
ಹಾಲುಹಸುಳೆಯ ಮಂದಹಾಸವನ್ನು ಲೇಪಿಸದಕೆ,
ಒಳಗಿರಿಸು, ಜೇನು ನಗುವವೊಲಿನಿಯ ನಾಲಿಗೆಯ
ಮೇಣ್ ಹಿಮಗಿರಿಯ ಮೀರಿಸಿ ನಿಮಿರ್ದ ಹಿರಿಯಾತ್ಮವ.

ಪೂರಣವೊ? ನೋಯಬೀನ್ಸ್‌, ಖರ್ಜೂರ, ಮೇಕೆ ಹಾಲು!
ಮೇಲಿನಂಚಿನವರೆಗು ದುಃಖಿಗಳ ಕಣ್ಣೀರು ತುಂಬಿ
ಪಕ್ವಮಾಡಿ ಇದನು ಸೆರೆಮನೆಯೊಳೊಂದಿನಿತು ವರುಷ
ಹೊರಗೆ ತೆಗೆ ವರಯ ಪರಿವಾರದಿಂ ಗಮಗಮಿಸಗೊಳಿಸಿ,
ಚಿಂದಿಯಂ ಸುತ್ತಿ, ಸೆಳಬೊಂಬಿನಾಲಂಬವನ್ನಿತ್ತು
ಬಡಿಸು ತಾ? ಅವನೆ ಕಾಣ್! ಲೋಕತಾರಕ! ನಮ್ಮಬಾಪೂ!
*****

ಅನುವಾದ – ಜಿ. ಪಿ. ರಾಜರತ್ನಂ

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸತ್ಯ
Next post ಬಹುರೂಪಿ

ಸಣ್ಣ ಕತೆ

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

cheap jordans|wholesale air max|wholesale jordans|wholesale jewelry|wholesale jerseys