ಗುರುಸಿದ್ಧರಾಜಯೋಗೀಂದ್ರರ ಲಿಂಗೈಕ್ಯ

ಅಳುವಿರೇಕೆ ನೀವು, ಬಿಸಿಯುಸಿರು ನಿಮಗೇಕೆ?
ಕಣ್ಣೀರು ಸುರಿಸುವಿರಿ, ಎದೆತುಂಬಿ ಕುಸಿಯುವಿರಿ
ಕಣ್ಣು ಕೆಂಪಾಗಿಹುದಲ್ಲ! ಇನ್ನಳವು ಏಕೆ ?
ಅತ್ತು ಬಿಗಿದಿವೆ ಕ೦ಠ, ಮರೆಯಿರಿದೋ ದುಃಖದುರಿ

ನಿಮ್ಮಳವು ನನಗಿರದೇ ? ಸಾವು ನಮ್ಮೆಲ್ಲರದು
ಮಣ್ಣು ಕೊಟ್ಟಿಹ ದೇಹ ಮಣ್ಣಿಗರ್ಪಿತವಹುದು
ಮಣ್ಣಿಗೆ ಮರೆತು ಅನ್ನುವೆವು ‘ನಾವು’ ಎಂದು
ದೇಹ ನಾವಲ್ಲ; ಮಣ್ಣಹುದು, ಮಣ್ಣು ಮಣ್ಣಿಗಾಗಿಹುದು

ನೀವು ಗಳಿಸಿದ ದೀಪ ಮೂರುಸಾವಿರ ದೀಪ
ಆ ದೀಪ ಕಿರಿಯಹುದೇ? ಕೊನೆಯಹುದೇ? ಹೇಳಿ
ಆರದಾ ದೀಪ ಗುರುಸಿದ್ಧ ನಂದಾದೀಪ
ಗುರುಸಿದ್ಧದೇವರಳಿದಿಲ್ಲ; ಅಳಿದುದವರ ದೇಹ ಕೇಳಿ

ಗಂಗಾಧರ ವಾಣಿಜ್ಯ ವಿದ್ಯಾಲಯದ ವಾಣಿಯವರು
ಶಾರದೆಯ ವೀಣೆಯದೋ ನುಡಿಸಿತವರ ಕೃಪಾ ಸುಧೆ
ಕಾಡಸಿದ್ಧೇಶ್ವರನ ಗುರುಸಿದ್ಧನಾಶ್ರಯಿಸಿಹನು
ಅತನು ಬೆಳೆಯುತೆ; ಆಶ್ರಯದಾತನಳಿಯಬಹುದೇ?

ಕಿರಿಯರಿಗೆ ಹಿರಿಯರಿಗೆ ನೀಡಿತವರ ಕಾಮಧೇನು ಕರವು
ವಿದ್ಯೆಯನು, ಬುದ್ಧಿಯನು, ಪುಣ್ಯವನ್ನು ಧರೆಯೊಳು
ನಾವುಂಡ ಅಂಮೃತದಲಿ ಅವರಾತ್ಮ ಕಾಣುವೆವು
ಅವರ ತತ್ವ ಕಳೆ ಏರಿ ಬೆಳೆಯುತ್ತಿದೆ ಭುವಿಯೊಳು

ಶಿವಯೋಗ ದಿನದಂದು ಗುರುಸಿದ್ಧ ಶಿವಯೋಗಿ
ಶಿವನೊಳೊಂದಾಗಿ ಗಂಗಾಧರ ಶಿವಯೋಗಿ ರೂಪತಾಳಿದರು
ಮೂರುಸಾವಿರ ಮಠದ ಸರ್ವಭಕ್ತರಿಗೆ ಆಶೀರ್ವದಿಸಿ
ರಾಜೇಂದ್ರಯೋಗಿಯದೋ ನಿಜಸಾಕ್ಷಾತ್ಕಾರ ತೋರುತಿಹರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತಾಬೇದಾರ
Next post ಕನ್ನಡ ತನ್ನಷ್ಟಕ್ಕೆ ಕಮ್ಸು ಟು ಅಸ್ಸು

ಸಣ್ಣ ಕತೆ

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

cheap jordans|wholesale air max|wholesale jordans|wholesale jewelry|wholesale jerseys