ಅಪ್ಪಯ್ಯನವರ ಪಾದ ಕಂಡೆ

ಅಪ್ಪಯ್ಯನವರ ಪಾದ ಕಂಡೆ ಸ್ವಾಮಿ
ಗುಡಿಪುರ ಗ್ರಾಮದೊಳೇರಿಸಿ ಜಂಡೇ ||ಪ||

ಉಕ್ಕುತಿಹ ಆನಂದ ಭರದಿ
ಸಕ್ಕರೆಯನೋದಕಿಯ ಮಾಡಿ
ಓಂಕಾರ ಪ್ರಣಮವ ನೋಡಿ
ಬಹುಕಾಲ ಭಕ್ತರ ಕೂಡಿ
ಬಸವಾದಿ ಪ್ರಮಥರು ಹಾಡಿ ||೧||

ಅಂಬರಪುರವಿಂಬುಮಾಡಿ
ಸಾಂಬನೂರವಿಲೆ ಬೆಳಿಸ್ಯಾರೊ ಸಾಮಗ್ರಿಗೂಡಿ
ಶಂಭು ಶರಣರು ಸವಿದಾಡಿ
ಹತ್ತುವರ್ಷ ಆದ ಮೇಲೆ
ಸತ್ಯ ಮೆರೆವದು ಮಹಾತ್ಮರಲ್ಲೆ
ಗೊತ್ತುಹಿಡಿ ಗೋವಿಂದರಾಜನ
ಪ್ರಣಮ ಪಂಚಾಕ್ಷರ ಧ್ಯಾನಿಸಿ ನುಡಿ
ಪರಮಾರಾಧ್ಯ ಪಂಚಾಚಾರ್ಯರು ಕೂಡಿ ಆಡವನು ಆಡಿ
ಪರಮೇಶ್ವರ ಪಾರ್ವತಿ ಹಾಡಿ ||೨||

ಪರಲೋಕದವರೆಲ್ಲ ಕೂಡಿ
ಪಂಚಾಗ್ನಿಮಠದೊಳು ಅಡಿಗೆಯ ಮಾಡಿ
ಅನ್ನ ಪ್ರಸಾದವ ನೀಡಿ
ಚೆನ್ನಬಸವೇಶ್ವರರು ಬರುತಿರೆ ಪ್ರಮಥ ಗಣಂಗಳು ಕೂಡಿ
ಕಲ್ಯಾಣಪುರವನು ಮಾಡಿ
ಹರ ಶರಣರ ಲೀಲಾಮೃತ ಪಾಡಿ
ಕಲಿ ಕರ್ಮ ವಿಕಾರಿಗೆ ಜಾಡಿ
ಶಿಶುನಾಳ ಗ್ರಾಮಕ ಕೂಡಿ
ಉಳಿದವರು ಗುರುಪಾದ ಕೂಡಿ ||೩||
* * * *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆದಿಬಸವ ಅನಾದಿಯಿಂದಲು
Next post ಮೈಲಾರ ಮಹದೇವ ಕೈಲಾಸಪತಿಯೆ

ಸಣ್ಣ ಕತೆ

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

cheap jordans|wholesale air max|wholesale jordans|wholesale jewelry|wholesale jerseys