ಆಗಮನ

ವಾಯುಸಂಚಾರಿ ಒಂದು ಪಟ್ಟಣದಿಂದ ಇನ್ನೊಂದಕ್ಕೆ ಹಾರಿ
ಬರುತ್ತಿದ್ದಾನೆ, ಕೆಳಗೆ ಮೋಡಗಳ ಮೇಲೆ ಮೋಡಗಳು ಬಿದ್ದು
ಅವುಗಳಂಚಿನಲಿ ಸೂರ್ಯನ ರಶ್ಮಿಗಳೆದ್ದು
ನಿಮಿಷಗಳು ಸರಿದರೂ ಸರಿಯುವುದಿಲ್ಲ ದಾರಿ

ಹೊಸೆಯುತ್ತಾನೆ ಮನಸ್ಸಿನಲ್ಲಿ ಒಂದು ಕವಿತೆಯ ಚರಣ:
ಎಲೆಲೆ ಗಗನ ಸಖಿ ಚಂದ್ರಮುಖಿ ಬಾರೆ
ಕಳಚಿ ಈ ಸೂಟುಬೂಟು ಆ ಅನಗತ್ಯದ ಸೀರೆ
ಮೋಡಗಳ ಮೆತ್ತೆಯೊಳಕ್ಕೆ ಹಾರೋಣ!

ಫಾರೂಕಬ್ದುಲ್ಲನ ಪತನ ವಿರೋಧಪಕ್ಷಗಳ ಪ್ರಕ್ಷೋಭನ
ಆಂತುಲೆಯ ವಿಚಾರಣೆ ಮುಂಬರುವ ಲೋಕಸಭಾ ಚುನಾವಣೆ
ಶೇರುಗಳ ಏರಿಳಿತ ಡಾಲರಿನ ಅನಿರೀಕ್ಷಿತ ಕುಸಿತ
ಶಬನಾ ಆಜ್ಮಿ ಸ್ಮಿತಾಪಾಟೀಲರ ಒಳಜಗಳ

ಆಹ! ಎಂತಹ- ಪೃಷ್ಠ!
ತಬ್ಬಿಕೊಳ್ಳಲೆಂದೇ ಉಬ್ಬಿನಿಂತ ಮಾಟ
ಕೇವಲ ಒಂದು ಒಳಚಡ್ಡಿಯ ಜಾಹೀರು
ಇರಲಿರಲಿ! ಈ ವಾರದ ಭವಿಷ್ಯ
ಏನು ವಿಷಯ?

“ಇಳಿಯಲಿದ್ದೇವೆ ನಾವೀಗ!
ದಯವಿಟ್ಟು ನಿಮ್ಮ ನಿಮ್ಮ
ಸೀಟು ಬೆಲ್ಟುಗಳನ್ನು ಕಟ್ಟಿಕೊಳ್ಳಿರಿ!
ಹೊಗೆಬತ್ತಿ ಸೇದದಿರಿ ! ಕೃತಜ್ಞತೆಗಳು !”
ಎನ್ನುತ್ತಾಳವಳು.

ಹೊರಗೆ ನೋಡುತ್ತಾನೆ-ಮೋಡಗಳಿಲ್ಲ
(ಶುಭ್ರ ವಾತಾವರಣ, ಸುಖಾಗಮನ)
ಎಷ್ಟೋ ದೂರ ಕೆಳಗೆ
ನೆಲ ಬಿದ್ದಿದೆ ಚಾಪೆಯ ಹಾಗೆ
ಮನೆ ಮರ ಕಾರ್ಖಾನೆ
ಮರೆತುಬಿಟ್ಪ ಆಟಿಕೆಗಳಂತೆ
ಮೊಡವೆಗಳಂಥ ಬಂಡೆಗಳು
ಇರುವೆಗಳಂತೆ ಸರಿಯುವ ಮನುಷ್ಯರು
ಇಷ್ಟೆತ್ತರದಿಂದಲೇ ಹೀಗೆ ಕಾಣಿಸಿದರೆ
ಇನ್ನೊಂದು ಗ್ರಹದಿಂದ ಹೇಗೆ ಕಾಣಿಸಬೇಡ!
ಎಂದುಕೊಳ್ಳುತ್ತಾನೆ-ಸೆಜಿಟೇರಿಯಸ್
ಧನುರ್ಧಾರಿ ಎಷ್ಟೋ ಬೇಟೆಗಳ ಹೊಡೆದವನು
ಸೀಟಿನೊಳಕ್ಕೆ ಜಾರಿ

ಎಂಥ ಸೆಕೆ ನೆಲದ ಮೇಲೆ
ನೂಕು ನುಗ್ಗಲು ಬೇರೆ!
ಯಾರ ಹೆಂಡಿರು ಯಾರ ಮಕ್ಕಳು
ಯಾರು ಯಾರಿಗೆ ಹಿಡಿದು ನಿಂತ ಹಾರಗಳು?
ಬಾಗಿಲಿನಿಂದಾಚೆ ಇರಿಸುತ್ತಾನೆ ಪಾದ
ಪರಿಚಯದ ಮುಖಗಳಿಗಾಗಿ ಹುಡುಕುತ್ತಾನೆ
ಇವನಲ್ಲ! ಇವನಲ್ಲ! ಎನ್ನುತ್ತವೆ
ಪ್ರತಿಯೊಂದು ಜತೆ ಕಣ್ಣುಗಳು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹದ
Next post ಮಲೆನಾಡು

ಸಣ್ಣ ಕತೆ

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

cheap jordans|wholesale air max|wholesale jordans|wholesale jewelry|wholesale jerseys