ಹಿಮ ಮಾನವ

ನೀರಿಲ್ಲ ನೆರಳಿಲ್ಲ
ಹೊರಗೆ ಕಾಲಿಡುವಂತಿಲ್ಲ
ಅಂಥ ಕಡು ಬೇಸಗೆಯಲ್ಲಿ
ಹಿಮಾಲಯದಿಂದೊಬ್ಬ ಹಿಮ ಮಾನವ
ಹೈದರಾಬಾದಿಗೆ ಬಂದು ಕುಳಿತನು
ಒಂದು ದೊಡ್ಡ ಬಂಡೆಯ ಮೇಲೆ

ಅದೇನು ವಿಚಿತ್ರ!
ತಣ್ಣಗಾಯಿತು ಹವೆ ಒಮ್ಮೆಲೆ
ಹುಲ್ಲು ಕಮರಿದಲ್ಲಿ
ನೆಲ ಬಿರಿದಲ್ಲಿ
ಎದ್ದವು ನೀರ ಬುಗ್ಗೆಗಳು
ತುಂಬಿತು ಕೆರೆ ಹಳ್ಳ
ಒದ್ದೆಯಾಯಿತು ರಸ್ತೆ

ಇನ್ನೇನು ಪರವಾಯಿಲ್ಲಿವೆಂದು
ಜನ ನಿಟ್ಟುಸಿರು ಬಿಟ್ಟರು

ಇತ್ತ ಹಿಮಮಾನವ ಮಾತ್ರ
ನೆಟ್ಟ ದೃಷ್ಟಿಯಲಿ ಕುಳಿತಿದ್ದವನು
ಕರಗುತ್ತಲೇ ಇದ್ದನು
ಮೊದಲವನ ಕೈಕಾಲುಗಳು ಕರಗಿದುವು
ಕಣ್ಣುಗಳು ಕರಗಿದುವು
ತಲೆ ಕರಗಿತು ಹೊಟ್ಟೆ ಕರಗಿತು

ಶಿಶ್ನ ಕರಗಿತು
ಕೊನೆಗುಳಿಯಿತೊಂದು ಬರ್ಫದ ತುಂಡು
ಆಮೇಲೆ ಅದೂ ಕರಗಿತು

ಬಂಡೆಯೊಂದೇ ಉಳಿದುದು
ಖೈರತಾಬಾದಿನಲಿ ಕರಗದೆ
ಇನ್ನೊಂದು ಬೇಸಿಗೆಗೆ
ಇನ್ನೊಬ್ಬ ಹಿಮಮಾನವನು
ಬರುವನೇ ಬಾರನೆ
ಕವಿಯೇ ಹೇಳು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಕ್ಕಳೆಂದರೆ
Next post ಸಂಚಕಾರ

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

cheap jordans|wholesale air max|wholesale jordans|wholesale jewelry|wholesale jerseys