ಕವಿಯ ಹುಚ್ಚು ಮನಸ್ಸು

ಕವಿಯ ಹುಚ್ಚು ಮನಸ್ಸು
ಕುಳಿತಲ್ಲಿ ಕೂರುವುದಿಲ್ಲ
ಒಂದು ವಸ್ತುವಿನಿಂದ
ಇನ್ನೊಂದು ವಸ್ತುವಿಗೆ
ನೆಗೆಯುತ್ತಲೇ ಇರುತ್ತದೆ

ಅದು ಉದಾತ್ತವಾಗಲು ಬಯಸುತ್ತಲೇ
ಸಣ್ಣತನವನ್ನೂ ತೋರಿಸುತ್ತದೆ
ತಥಾಗತನ ಧ್ಯಾನದಲ್ಲಿ ಕೂಡ
ಯೋನಿ ಶಿಶ್ನಗಳ ಕುರಿತು
ಯೋಚಿಸುತ್ತದೆ

ಶಬ್ದ ನಿಶ್ಯಬ್ದಗಳ
ಶ್ವಾಸ ನಿಶ್ವಾಸಗಳ
ಬೆನ್ನು ಹತ್ತುತ್ತದೆ
ತೆರೆದ ಕಿಟಕಿಗಳ
ಒಳಗೆ ಹಣಿಕುತ್ತದೆ

ಕಾಣುವ ಸಂಗತಿಗಳನ್ನು
ಕಡೆಗಣಿಸುತ್ತದೆ
ಕಾಣದ ಸಂಗತಿಗಳನ್ನು
ಕಂಡಿದ್ದೇನೆಂದು
ಭ್ರಮಿಸುತ್ತದೆ

ಸರಿ ಸರಿ ಯೋಚಿಸುದದನೆಲ್ಲ
ಬರೆಯಬೇಕಾಗಿಲ್ಲ
ಎಲ್ಲ ಮುಚ್ಚು ಮರೆಗಳನೂ
ತೆರೆದು ಮುಖಕ್ಕೆ
ಹಿಡಿಯಬೇಕಾಗಿಲ್ಲ

ತೋರಿಸು ಆಕಾಶ, ಸಮುದ್ರ.
ಹಿಮಾಲಯ, ಅಚ್ಛೋದ ಸರೋವರ
ನಾಗಾರ್ಜುನ ಸಾಗರ ಅಣೆಕಟ್ಟು
ಕನಾಟ್ ಸರ್ಕಲು
ಶೆರಾಟನ್ ಹೋಟೆಲು

ಒಂದೊಂದು ವಿಚಾರಗಳನ್ನೂ
ಚಿನ್ನದ ನೀರಲ್ಲಿ ಅದ್ದಿ ತೆಗೆ-ಆಗ ಅವು
ಥಳಥಳಿಸುವುವು-ಅವರವರ
ಪ್ರಿಯತಮೆಯರ ಕೊರಳ
ಆಭರಣಗಳಂತೆ

ಜನರು ಆದರಿಸುವರು ಮಹಾ
ದಾರ್ಶನಿಕನೆಂದು ಹೊಗಳುವರು
ಎಲ್ಲರೂ ಕರೆಯುವರು
ಯಾರೂ ತಮ್ಮ ಹೆಂಡಂದಿರನ್ನು
ನಿನ್ನ ಜತೆ ಬಿಡಲು ಹೆದರರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಪರ್ಯಾಸಗಳು
Next post ಸೂರ್ಯ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

cheap jordans|wholesale air max|wholesale jordans|wholesale jewelry|wholesale jerseys