ನೂರು ಮಂದಿ ಮನುಷ್ಯರು

ಒಮ್ಮೆ ನೂರು ಮಂದಿ ಮನುಷ್ಯರು ಸಿಕ್ಕಿಬಿದ್ದರು
ಒಂದು ದ್ವೀಪದಲ್ಲಿ. ಮೊದಲು ಅವರು ಅಲ್ಲಿನ
ಸಸ್ಯಗಳನ್ನು ತಿಂದರು. ನಂತರ ಅಲ್ಲಿನ ಪ್ರಾಣಿಗಳನ್ನು
ಮುಗಿಸಿದರು. ನಂತರ ತಮ್ಮಲೊಬ್ಬರನ್ನು
ವಾರಕ್ಕೊಂದರಂತೆ ತಿಂದರು. ಕೊನೆಗುಳಿದವನು
ಒಬ್ಬನೇ ಒಬ್ಬ. ಅವನು ಮೊದಲು ತನ್ನ ಪಾದದ
ಬೆರಳುಗಳನ್ನು ತಿಂದ. ನಂತರ ಪಾದಗಳನ್ನು ತಿಂದ.
ನಂತರ ಕೈಬೆರಳುಗಳನ್ನು ತಿಂದ. ನಂತರ
ಕೈಗಳನ್ನು ತಿಂದ. ನಂತರ ಕಣ್ಣು ಕಿವಿ ಮೂಗುಗಳನ್ನು
ಒಂದೊಂದಾಗಿ ತಿಂದ. ಕೊನೆಗೆ ತನ್ನ ತಲೆಯನ್ನೇ
ತಿನ್ನತೂಡಗಿದ! ಅರೆ! ಇದು ಹೇಗೆ ಸಾಧ್ಯವೆಂದು
ಕೇಳದಿರಿ. ಇಂಥ ಪ್ರಶ್ನೆ ಮೊದಲೇ ಕೇಳಿರುತ್ತಿದ್ದರೆ
ಈಗ ಇಂಥ ಸ್ಥಿತಿ ಯಾರಿಗೂ ಬರುತ್ತಿರಲಿಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕ್ರಾಂತಿ ಹರಿಕಾರ ಸುಭಾಷ ಚಂದ್ರ
Next post ಬಹುಪತಿತ್ವ

ಸಣ್ಣ ಕತೆ

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

cheap jordans|wholesale air max|wholesale jordans|wholesale jewelry|wholesale jerseys