ಕವಿತೆ: ಶಾಂತಿನಾಥ ದೇಸಾಯಿ ಅವರಿಗೆ

ನೆನಪಿಸಿಕೊಳ್ಳಿ ರೆಡಿಂಗ್‌ನಿಂದ ಬ್ರೌಟನ್‌ವರೆಗಿನ
ನಮ್ಮ ಯಾತ್ರೆಯನ್ನು. ಇಂಗ್ಲೆಂಡ್ ಮುಗಿದು
ವೇಲ್ಸ್ ಮೊದಲಾಗುತ್ತಲೆ ಬದಲಾದ ಹವೆಯನ್ನು.

ಬ್ರೌಟನ್ ಪಬ್ಬಿನಲ್ಲಿ ಸಂಜೆ ಕೈಗೊಂಡ
ಮದ್ಯಪಾನ–ತಟಕ್ಕನೆ ಆರಂಭವಾದ
ಬ್ಯಾಂಡಿಗೆ ತಾಳ ಹಾಕುತ್ತ ನೀವು ಕಳೆದ

ಪ್ರಣಯಗಳ ಬಗ್ಗೆ ಮಾತಾಡುತ್ತ ಕರಗಿದ್ದನ್ನು.
ಆಚೆಗೆ ಕುಳಿತಿದ್ದಾಕೆ ಇನ್ನೊಂದು ಬದಿಯಿಂದ
ಹೇಗೆ ಕಾಣಿಸುತ್ತಿದ್ದಾಳೆಂದು ನೋಡಲು

ಬೇಕೆಂದೆ ಮತ್ತೆ ಮತ್ತೆ ನಾನು
ಬೀಯರ್ ಕೊಳ್ಳಲು ಎದ್ದು ಹೋದುದನ್ನು.
ನೆನಪಿಸಿಕೊಳ್ಳಿ ಮತ್ತೆ ನಮ್ಮ ಚೆಸ್ಟರ್ ಸಂಚಾರ-

ಡೀ ನದಿಯ ಮೇಲೆ ವಿಹಾರ-ಬೋಟಿನ ತುಂಬ ಜನ
ಹೆಂಗಸರು ಗಂಡಸರು ಅನೇಕ ಮೂಡುಗಳಲ್ಲಿ
ಬೇಸಿಗೆಯ ಕನಿಷ್ಟ ಉಡುಪುಗಳಲ್ಲಿ

ಅಂಥ ಯಾವಳೋ ಹೆಂಗಸಿನ ದೃಶ್ಯಗಳನ್ನು
ಕ್ಯಾಮರಾದಲ್ಲಿ ನೀವು ಹಿಡಿಯಲು ಯತ್ನಿಸಿ
ಸೋತುದನ್ನು-ಅದರೆ ಕಣ್ಣಿನಲ್ಲಿ ಖಂಡಿತ ಅಲ್ಲ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಲನ ಕರೆ
Next post ವಕ್ರದೃಷ್ಟಿ

ಸಣ್ಣ ಕತೆ

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

cheap jordans|wholesale air max|wholesale jordans|wholesale jewelry|wholesale jerseys