ಅಖಿಟೋಪ

ಮೆಸಪೊಟೇಮಿಯಾದ ಒಬ್ಬ ರಾಜ
ಚರಿತ್ರೆಯಲ್ಲಿ ಶಾಶ್ವತವಾಗಿ ಉಳಿಯಬೇಕೆಂದು
ಕೆತ್ತಿಸಿದ ತನ್ನ ಹೆಸರನ್ನು
ಹೆಸರು ಅಖಿಟೋಪನೆಂದು
ಹೆಬ್ಬಂಡೆಗಳ ಮೇಲೆ
ಮೃತ್ತಿಕೆಗಳ ಮೇಲೆ
ಮರದ ಕಾಂಡಗಳ ಮೇಲೆ
ಬರೆಸಿದ ಪಠ್ಯ ಪುಸ್ತಕಗಳಲ್ಲಿ
ಸೇರಿಸಿದ ಧರ್ಮಗ್ರ೦ಥಗಳಲ್ಲಿ
ಪೂಜಾರಿಗಳ ಮಂತ್ರಗಳಲ್ಲಿ
ಎಲ್ಲೆಲ್ಲು ಅಖಿಟೋಪ ಅಖಿಟೋಪ
ಎಷ್ಟೆಂದರವನ ಕೋಪ
ಕುದುರೆಗಳು ಕೆನೆಯುವುದೂ
ಕಪ್ಪೆಗಳು ವಟಗುಟ್ಟುವುದೂ
ಆದವು ಅಖಿಟೋಪ
ಅಖಿಟೋಪನೆಂದರ ಅಂದಿನ ಭಾಷೆಯಲ್ಲಿ
ಅನೇಕ ಸೂರ್ಯರ ತಾಪ-
ವೆಂದು ಅರ್ಥ

ಆದರೆ ಮೊಂಗೋಲರೆಂಬವರು
ಮಹಾ ನಿರ್ದಯರು
ಅವರು ಮಾಂಸ ಬೇಯಿಸದೆ ತಿನ್ನುತ್ತಿದ್ದರು
ಕಳ್ಳಿನ ಭಾಂಡಿ ಕುಡಿಯುತ್ತಿದ್ದರು
ಕುಡಿದು ಢರ್ರನೆ ತೇಗುತಿದ್ದರು
ದೊಡ್ಡದಾಗಿ ನಗುತಿದ್ದರು
ಅವರು ಚೀನಾ ದೇಶದಿಂದ
ಸಿಡಿಮದ್ದನ್ನು ತಂದರು
ಕುದುರೆಗಳ ಮೇಲೆ ಬಂದರು

ಸಂತೆಗೆಂದು ಹೋದ ದೋಣಿಗಳು
ಸಂಜೆಯಾದರೂ ಮರಳಲಿಲ್ಲ
ನಗರದ ಬಾಗಿಲುಗಳು
ಹೊತ್ತಿಗೆ ಮೊದಲೇ ಮುಚ್ಚಿದುವು
ದೀಪಗಳೂ ಆರಿದುವು
ಯಾವಾಗಲೂ ಹಾಡುತಿದ್ದವರು
ಯಾಕೆ ಹಾಡಲಿಲ್ಲ?
ಮತ್ತೆ ಬೆಳಗಾಯಿತು?
ವರ್ಷಗಳು ಉರುಳಿದುವೆ?
ಯಾರಾದರೂ ಸುದ್ದಿಯನು ತಂದರೆ?
ಮೆಸಪೊಟೇಮಿಯಾ!
ಹರಿವ ನೀರಿನಲಿ
ಕೆತ್ತಿರುವುದೆ ಚರಿತ್ರೆ?
ಹೇಳೀಗ ನಮ್ಮ ಮೆಚ್ಚಿನ ಅಖಿಟೋಪನೆಲ್ಲಿ?
ಎಲ್ಲಿ ಆ ಮಂತ್ರಗಳು
ಹೆಸರು ಬರೆಸಿದ ಗ್ರಂಥಗಳು
ಎಲ್ಲಿ ಕುದುರೆಗಳು ಎಲ್ಲಿ ಕಪ್ಪೆಗಳು
ಎಲ್ಲಿ ಆ ಹೆಬ್ಬಂಡೆ
ಸಿಡಿದ ನದಿ ದಂಡೆ
ಅನೇಕ ಸೂರ್ಯರ ತಾಪ
ಅಖಿಟೋಪ
ಯಾವ ಸಮುದ್ರದಲಿ ಬಿದ್ದ
ಹೇಳು ಮೆಸಪೊಟೇಮಿಯಾ
ಅಂಥ ಪತನಕ್ಕೆ
ಇಂಥ ಸಾಲುಗಳು ಸಾಕೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೌಣ
Next post ಮೌಲ್ಯ

ಸಣ್ಣ ಕತೆ

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

cheap jordans|wholesale air max|wholesale jordans|wholesale jewelry|wholesale jerseys