ತುತಂಖಮನ್

ಲಕ್ಸರಿನ ಬೀದಿಯಲ್ಲಿ
ಪೋಲೀಸರು ಒಬ್ಬ ಕಳ್ಳನನ್ನು
ಬಿಡದೇ ಮರ್ದಿಸುತ್ತಿದ್ದಾರೆ
ಅವನ ದವಡೆ ಒಡೆದು
ರಕ್ತ ನಿರಂತರ ಸೋರುತ್ತಿದೆ.

ಕೈರೊದ ಕ್ಲಬ್ಬಿನಲ್ಲಿ ಒಬ್ಬಾಕೆ
ಎಲ್ಲರನ್ನೂ ಕೇಳುತ್ತಿದ್ದಾಳೆ:
ಹಿಂದಾದುದನ್ನು ನಾನು ಕಂಡಿದ್ದೇನೆ
ಮುಂದಾಗುವುದು ನನಗೆ ಗೊತ್ತು-
ಹಾಗಂದರೇನು?

ಚರಿತ್ರೆಯ ಏಕಾಂತವನ್ನು ಮುರಿದವರು
ಮಾತಿಗೆ ಹೊಣೆಯಾಗುವರು
ಆದರೆ ಚರಿತ್ರೆ ಯಾರಿಗೂ ಹೊಣೆಯಲ್ಲ.

ಇಲ್ಲಿ ಹಿಂದೆ ಸೂರ್ಯನು
ದೇವರಾಗಿದ್ದ ಎಂದು ಹೇಳುತ್ತಾರೆ-
ಈ ಕಠಿಣ ಶಿಲೆಗಳಿಗೆ ಅಲ್ಲದಿದ್ದರೆ
ಇನ್ನೇನರ್ಥ- ?
ಆತನ ಚಿನ್ನದ ಕಣ್ಣುಗಳ ಮೇಲಿಂದ
ನೈಲ್ ನದಿಯ ನೆರೆ ನೀರು
ಅನೇಕ ಬಾರಿ
ಹರಿದು ಹೋಯಿತು.

ನಿಮಗೆ ಭೂತ ಪ್ರೇತಗಳಲ್ಲಿ
ಸದಾಚಾರದಲ್ಲಿ ಆತ್ಮದ
ಅಭಿಮಾನದಲ್ಲಿ ಪರಲೋಕದ
ನದೀತೀರಗಳಲ್ಲಿ ಹಾಗೂ
ಸತ್ತವರ ಶಾಪಗಳಲ್ಲಿ
ನಂಬಿಕೆಯಿಂದೆಯೇ?

ನಿಜ-
ವಿಷಯ ತುತಂಖಮನ್: ನಾನು ಮರೆತಿಲ್ಲ
ನನ್ನ ಮಾತುಗಳು ತಡವಿದರೆ
ಕ್ಷಮೆಯಿರಲಿ!
ನಿಮ್ಮ ಮುಖದಲ್ಲಿ ನನಗೆ
ನನ್ನ ಹಿಂದೆ ನಿಂತವರು
ಕಾಣಿಸುತ್ತಿದ್ದಾರೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಳೆ ಮತ್ತು ಮಗು
Next post ವಿಷಯ

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

cheap jordans|wholesale air max|wholesale jordans|wholesale jewelry|wholesale jerseys