ವಿಪರ್ಯಾಸ

ಏನು ಬರೆಯಲಿ ಏನು ಹಾಡಲಿ
ದಿನದ ಕಾವ್ಯಕೆ ಶುಭನುಡಿ,
ನಿತ್ಯದುದಯವು ಬರೆವ ಮುನ್ನುಡಿ
ಪುಟ-ಪುಟಕೂ ನೀಡಲು ಕೆಂಗಿಡಿ,

ನಿಸರ್ಗ ಸಗ್ಗವು ಬೆಂಗಾಡಾಗಿರೆ
ಇನ್ನೆಲ್ಲಿ ಪೂಜೆಯು ಪ್ರಕೃತಿಗೆ,
ಇಂಚರದ ಬಳಗಕೆ ಠಾವೆ ಇರದಿರೆ
ಎಲ್ಲಿನ್ನೆಲ್ಲಿ ಗಾನವು ಕೊಳಲಿಗೆ,

ರಾಯರಳಿದರು ರಾಯತನವು ತಾ ಸಾಗಿರೆ,
ಯಾವ ನೆಲೆಯಿದೆ ಹಸಿವಿನೊಡಲಿಗೆ,
ಧರ್ಮದರ್ಥವು ಅನರ್ಥವಾಗಿರೆ
ಇನ್ನಾವ ಬೆಲೆಯಿದೆ ದೇವ ಪ್ರೀತಿಗೆ….

ಜಗವೆ ಮಾರುವ ಕಟ್ಟೆಯಾಗಿರೆ
ಕೊಡು ಕೊಳ್ಳುವವರೆತ್ತಬಲ್ಲರು ಮಾನ’ವ
ಸರಕು ನೂಪುರ ಗಂಟೆ ಮೊಳಗಿರೆ
ಸುಪ್ರಭಾತವೆಲ್ಲಿಯೋ ಮಾನವ….

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರಗೊಡವಿನ್ನೇನು ಮಗಳೆ
Next post ದೇವರಿಗೆ ಬಿಟ್ಟಿದ್ದು

ಸಣ್ಣ ಕತೆ

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

cheap jordans|wholesale air max|wholesale jordans|wholesale jewelry|wholesale jerseys