ಜಟಿಲ ಬದುಕಿನ ಯಕ್ಷ ಪ್ರಶ್ನೆಗಳು
ಹೊಡೆಮರಳಿ ಕಾಡುವವು ಯಾಕೋ?
ಸಮೃದ್ಧ ಸಂಸಾರ ಎಂದುಕೊಂಡರೂ
ಅತೃಪ್ತಿ ಅನಾಸಕ್ತಿ ಮುಲುಗುವುದು ಯಾಕೋ?
ಬಿಗಿವ ಬಿಗಿಸುವ ಬಗಿವ ಬಗ್ಗಿಸುವ
ಸಂಬಂಧ ಅನುಬಂಧಗಳು
ಬಾಯಾರಿ ಕಾಂಚಣಕ್ಕೆ ಕುಣಿಯುವವು ಯಾಕೋ?
ಜನನ ಮರಣದ ಗುಟ್ಟು
ಬೀಜ ವೃಕ್ಷದ ನ್ಯಾಯ
ಇಂಚಿಂಚು ಹಿರಿದು ಅರೆದು
ಹಿಂಜ ಹೊರಟರೂ ಹಾಗೆ ಗಹನ
ಅಗಮ್ಯವಾಗುವುದು ಯಾಕೋ?
ಇನ್ನಿಲ್ಲವೆಂದು ಕೊಂಡ ಇಂಬು
ಒಳಗಣ ಹಾದಿಯಲಿ ಸಜ್ಜಿಕೆಯ ಹಾಸುವುದು ಯಾಕೋ?
ಸುಖ ದುಃಖಗಳ ಪ್ರತಿಹತಗಳ ಪ್ರತಿಮೆ
ಕರಿಮೋಡದಂಚಿಗೆ ಬೆಳ್ಳಿ ಜರಿ ಸಿಂಗಾರ
ಬದುಕು ಚಮತ್ಕಾರ
*****
Related Post
ಸಣ್ಣ ಕತೆ
-
ಮೌನವು ಮುದ್ದಿಗಾಗಿ!
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
-
ಕೊಳಲು ಉಳಿದಿದೆ
ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…
-
ಕಳ್ಳನ ಹೃದಯಸ್ಪಂದನ
ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…
-
ಕನಸುಗಳಿಗೆ ದಡಗಳಿರುದಿಲ್ಲ
ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…
-
ಲೋಕೋಪಕಾರ!
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…