ದಾವಾನಲ ಧಾರಿಣಿ ಜಲ

ದಾವಾನಲ ಧಾರಿಣಿ ಜಲ ಆಗಸ ಅನಿಲದಲಿ
ಮಾಯದ ಗಾಯದ ಮಣ್ಣಿನ ಕಾಯದ ಹಂಗಿನಲಿ
ಸಾರದ ಸೇರದ ಎಂದೂ ಆರದ ಘನ ತರಣಿ
ಇರುಳಾಳುವ ಮನದಾಳಕೆ ಸುರಿ ಕಿರಣವ ಕರುಣಿ

ಎದೆಯಾಳದಿ ಎವತೆರದಿವೆ ಗತಭವಗಳು ಹೊರಳಿ
ಎಂದಿನ ಸ್ಮರಣೆಯ ಅರಣಿಯೊ ಹೊಗೆಯಾಡಿದೆ ನರಳಿ,
ಮೆಲೇಳುವ ಬಿಳಿ ಧೂಮದ ಜಾಲದ ಹಂಗಿನಲಿ
ಎಡವಿದೆ ಮತಿ ವಾದದ ಗತಿ, ಸುಳಿ ಬಿಚ್ಚಿದೆ ಕದಳಿ.

ಗಿರಿಹುತ್ತದ ತುಡಿಗೆತ್ತಿದ ದಿಙ್ನಾಗರ ಭೋಗ
ಸೆಳೆಯುತ್ತಿದೆ ಅಳೆಯುತ್ತಿದೆ ಅನುರಾಗದ ಆಳ
ಕರೆಯುತ್ತಿದೆ “ಬಾರೇ ಬಾ ನೀರೇ ನಿಧಿ ಸಾರೇ
ಇಡಿಚಿತ್ತದ ಮಧುಭಾಂಡದಿ ಏನೇನಿದೇ ತಾರೇ”

ಗಣಿಯಾಳದ ಜಲ ಮೇಲಕೆ ಜುಳು ಜುಳು ಜುಳು ಹರಿದು
ಯೋಗದ ಕಡಲಿಗೆ ಎಚ್ಚರ ನಿದ್ದೆಯ ತೊರೆ ನೆರೆದು
ಸಾಗುವ ಡೊಂಕಿನಲಾಗಲಿ ತೂಗಾಟದ ರಾಗ
ಹಾಲಿನ ಹರವಿಯ ಸಿಡಿಸುವ ಬೃಂದಾವನ ಭೋಗ.

ಮಾಗಿಯ ರಾತ್ರಿಯ ಮಂಜಿನ ಮಬ್ಬಿನ ತೆರೆ ಸರಿದು
ಕಾಣದ ನಿಜವಿಶ್ವದ ಹೊಸದರ್ಶನಗಳು ತೆರೆದು
ಸಾವಿರದಾ ನವವಸಂತ ಮಾವಿನ ಹರೆಯೇರಿ
ಕೂಗುವ ಕೋಗಿಲೆಯಾಗಲಿ ಜೀವವು ತೇಷೆಯಾರಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಾತು – ಮೌನ
Next post ಭಿನ್ನಮತ

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

cheap jordans|wholesale air max|wholesale jordans|wholesale jewelry|wholesale jerseys