ಶರಣಾದೆ ತಾಯೆ ಶರಣಾದೆ ಕಾಯೆ

ಶರಣಾದೆ ತಾಯೆ ಶರಣಾದೆ ಕಾಯೆ,
ನೆಲ ಕಾಡು ತೊರೆಯೆ, ಹಿರಿಸಾಲು ಗಿರಿಯೆ
ಒಡಲಾದ ಸಿರಿಯೆ.

ನೀ ತೆರೆದ ಕಣ್ಣುಗಳ ಕಾಂತಿಯೇ ಹಗಲು,
ಬೆಳಗೀತು ಭುವನವೇ ನೀನೊಮ್ಮೆ ನಗಲು;
ಕೋಪಿಸಲು ಆಕಾಶ ಕಾರುವುದು ಸಿಡಿಲು,
ಇರುಳೊಂದು ಎಲ್ಲಿದೆಯೆ ನಿನ್ನದೇ ನೆರಳು!

ಹೊಲದಲ್ಲಿ ತೂಗುವ ತೆನೆಗಳೇ ಸೆರಗು,
ಮರಬಳ್ಳಿ ಓಲಾಡಿ ಮೈತುಂಬ ಬೆರಗು,
ದೇಗುಲದ ಗಂಟೆಯಲಿ ದನಿತೆರೆದು ಕೊರಳು
ಶತ್ರುಗಳ ಎದೆಯಲ್ಲಿ ಬಿಚ್ಚುತಿದೆ ದಿಗಿಲು.

ಅಮ್ಮ ನಮ್ಮನು ನಿನ್ನ ಪ್ರೀತಿಯಲಿ ಮೆರೆಸೆ
ಪ್ರೀತಿ ಶಾಂತಿಯ ಅಮೃತ ಎದೆತುಂಬ ಸುರಿಸೆ;
ತಂದೆನಿದೂ ನಿನಗಾಗಿ ಕವಿತೆಗಳ ಮಾಲೆ
ಶೋಭಿಸಲಿ ನಿತ್ಯವೂ ನಿನ್ನದೆಯ ಮೇಲೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅದೇ ಮುಖ
Next post ತಾಪತ್ರಯ

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

cheap jordans|wholesale air max|wholesale jordans|wholesale jewelry|wholesale jerseys