ಅಮ್ಮಾ ನಿನ್ನ ಪುಣ್ಯಚರಣದ ಸಣ್ಣ ಧೂಳಿಯು ನಾನು

ಅಮ್ಮಾ ನಿನ್ನ ಪುಣ್ಯಚರಣದ ಸಣ್ಣ ಧೂಳಿಯು ನಾನು
ಅಮ್ಮಾ ನಿನ್ನ ಕಣ್ಣ ಕಾಂತಿಯ ಸಣ್ಣ ಕಿರಣವು ನಾನು

ಎಂಥ ಹೆಮ್ಮೆಯೆ ಅಮ್ಮ ನಿನ್ನ ಕಂದ ನಾನಾಗಿರುವುದು
ಸಾಟಿ ಇಲ್ಲದ ಭುವನಮಾತೆ ನನ್ನ ತಾಯಾಗಿರುವುದು

ಇತಿಹಾಸಕೇ ನಿಲುಕದ ಕಾಲಕೂ ನೀ ಪೂರ್ವಳು
ಉಪನಿಷತ್ತಿನ ಮಂತ್ರಗಾಥೆ ನಿನ್ನ ಪ್ರಥರ್ಮೊದ್ಗಾರವು
ಸೀತೆ ಎನ್ನುವ ತಾಳ್ಮೆಗೆ
ದ್ರೌಪದೀ ಸತಿ ಮೇಲ್ಮೆಗೆ
ನಿನ್ನ ಭಾವವೆ ಮೂಲ ಇಲ್ಲಿಯ ನಾರಿಯರ ಘನಕಾಣ್ಕೆಗೆ

ನಿನ್ನ ಜ್ಞಾನದ ಅಲೆಯು ಚಲಿಸಿ ವ್ಯಾಸ ಪಾಣಿನಿ ಬಂದರು
ಬುದ್ಧ ಗಾಂಧಿ ಕರುಣ ಭಾವದ ಸುಧೆಯ ಮೊಗೆದು ತಂದರು
ಕ್ಷಾತ್ರಭಾವಕೆ ಪಾರ್ಥನು
ತ್ಯಾಗಕೆ ಜೀಮೂತನು
ನಿನ್ನ ಪ್ರತಿಗುಣ ಗಣಿಗೆ ಕೋಟಿ ಹೊನ್ನಕಿಡಿಗಳ ಚಲನವು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದುಂಡಿರಾಜ
Next post ಸಂತೆ

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

cheap jordans|wholesale air max|wholesale jordans|wholesale jewelry|wholesale jerseys