ಬೇರೆ ದೈವ ಯಾಕೆ ಬೇಕು?

ಬೇರೆ ದೈವ ಯಾಕೆ ಬೇಕು
ತಾಯಿ ಈಕೆ ಸಾಲದೆ?
ಎಲ್ಲ ತೀರ್ಥ ಕೂಡಿ ನಿಂತ
ಸಾಗರವೆನೆ ಆಗದೆ?

ಲಕ್ಷ ಚಿಕ್ಕ ಹಕ್ಕಿ ಯಾಕೆ
ಗರಿತೂಗುವ ನವಿಲಿದೆ
ಯಾ ಹೂವಿಗೆ ಹೋಲಿಕೆ
ಕಂಪಾಡುವ ಮಲ್ಲಿಗೆ?

ಕವಿತೆಯಲ್ಲಿ ಹುಟ್ಟಿ ಬೆಳೆದು
ಕಥೆಯ ದಾಟಿ ಬಂದಳು
ವ್ಯಥೆಯ ಸೋಸಿ ದೇವಿ ಎನಿಸಿ
ಹಸೆಯ ಏರಿ ನಿಂದಳು

ಶೀಲ ಸಹನೆ ಶ್ರದ್ಧೆಗೆ
ಇಡೀ ಬಾಳು ತೇದಳೇ!
ಚೆಕ್ಕೆಯಲ್ಲಿ ದಿಟ್ಟಿ ಊರಿ
ಆದರ್ಶವ ಕಡೆದಳೇ!

ಸೀತೆಯೆನಲು ಪಾತ್ರವೇ
ಕಥೆಯ ಹೆಣ್ಣು ಮಾತ್ರವೇ?
ಅಕ್ಕತಂಗಿ ಅತ್ತಿಗೆ
ಮಾತೆ ಭರತಧಾತ್ರಿಗೆ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಂಕೇಶ್
Next post ಅರಿಕೆ

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

cheap jordans|wholesale air max|wholesale jordans|wholesale jewelry|wholesale jerseys