ಎಂಥ ಮಾತುಗಳ ಹೇಳಿದೆ ಗುರುವೇ

ಎಂಥ ಮಾತುಗಳ ಹೇಳಿದೆ ಗುರುವೇ
ನಮಸ್ಕಾರ ನೂರು
ಇಂಥ ನೀತಿಗಳ ಹೇಳಬಲ್ಲವನು
ಕಬೀರನಲ್ಲದೆ ಯಾರು?

ಹಿಂದೂ ಮುಸ್ಲಿಮ ಗಂಧಗಳೆಲ್ಲಾ
ಮಣ್ಣಿನ ಶರೀರಕಷ್ಟೇ;
ಆತ್ಮಕೆ ಮತದ ಬಂಧನವೆಲ್ಲಿದೆ?
ಇರುವುದು ಸತ್ಯದ ನಿಷ್ಠೆ

ವೇದ ಖುರಾನು ಗ್ರಂಥಸಾಹಿಬ
ದಾರಿಯಿವೆ ಹಲವಾರು,
ಯಾವ ದಾರಿಯಲಿ ಯಾರೆ ಬಂದರೂ
ಸಿಗುವುದು ಒಂದೇ ಊರು

ಬಯಸಿದಂತೆ ಜಿಗಿದೋಡುವ ತೊರೆಗಳು
ನಡುವೆ ನದಿಯ ಸೇರಿ
ಬಂದು ಕೂಡುವುವು ಕಡಲನು ಕೊನೆಗೆ
ತಮ್ಮ ರೂಪ ಮೀರಿ

ಪಾತ್ರೆಯ ಆಕೃತಿ ಹೇಗೆ ಇರಲಿ
ಒಳಗಾಡುವ ಜಲ ಒಂದೇ,
ಜಾತಿ ಮತವೆಲ್ಲ ಹೊರಗಿನ ಭೇದ
ಎಂದನು ಕಬೀರ ಅಂದೇ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅವತಾರ
Next post ಊನ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

cheap jordans|wholesale air max|wholesale jordans|wholesale jewelry|wholesale jerseys