ಉರುಳಿ ಅರಿವಿನ ಮೋರಿಯಲ್ಲಿ

ಉರುಳಿ ಅರಿವಿನ ಮೋರಿಯಲ್ಲಿ
ನರಳುತ್ತಿರುವೆ
ಇಲ್ಲಿ ನೆಮ್ಮದಿ ಎಲ್ಲಿ ?
ಕೊಳೆತು ನಾರುತ್ತಿರುದ ಹಳೆಯ ಭೂತ ;
ಅದರ ಮೇಲೇ ಮೊಳೆತ ಹೊಸ ಕನಸುಗಳ ತುಡಿತ,
ಎರಡು ಗಡಿಗಳ ನಡುವೆ
ಒಡೆದು ಬಿದ್ದಿದೆ ರೂಪ.
ಹೊಕ್ಕುಳಿನ ಹುರಿ ಕಡಿದು
ಹಳಿ ಬಿಟ್ಟು ಹೊರನಡೆದು
ಪ್ರತ್ಯೇಕತೆಯ ಸುಳ್ಳ ಕೋಟಿ ಕೊರಳುಗಳಲ್ಲಿ
ಕೂಗಿ ದಣಿದಿದೆ ಪಾಪ

ಚಿತ್ತ ಹೊತ್ತ ಮನುಷ್ಯ
ಚಿತ್ತವಿಲ್ಲದ ನೆಲ,
ಬೆಟ್ಟ ಮರ ಗಿಡ ಕಲ್ಲು,
ಹುಲ್ಲು ಪರಿಮಳ ಜಲ ;
ಯಾರು ಉತ್ತಮ, ಯಾರು ಅಧಮ, ಏತಕೆ, ಹೇಗೆ ?
ಯಾರು ಪಡೆಯುತ್ತಾರೆ ಯಾರಿಂದ, ಏತಕ್ಕೆ ?
ಹೇಗೆ ದುಡಿಸುತ್ತಾರೆ, ದುಡಿಸಿ ಗುಡಿಸುತ್ತಾರೆ
ಯಾರು ಯಾರನ್ನೇಕೆ ಜೀತಕ್ಕೆ ?

ಯೋಚಿಸಬರದ ಅಶೋಕ
ಋತು ತಪ್ಪದೆ ಸುರಿವ ಚಿಗುರು,
ಯೋಚಿಸಲಾಗದ ಆಲದ ಅರ್ಧ ಎಕರೆ ನೆರಳು
ಯೋಚಿಸಲಾಗದ ಮಾವು,
ಆಲೋಚಿಸಲಾಗದ ಹೂವು,
ಯೋಚಿಸುವ ಮನುಷ್ಯನನ್ನೇ
ಸಾಕುವ ಪರಿಯನ್ನು
ಆಲೋಚಿಸಬೇಕು ನಾವು

ಚಿತ್ತವೇ ಶತ್ರುವೇ ನಮಗೆ ? ಸೃಷ್ಟಿಯ ಹಡೆದ
ಮೂಲಕ್ಕೆ ಮಿಥ್ಯವೇ ?
ಅದಕ್ಕೂ ಮೀರಿದ ಶಕ್ತಿ ಜಡಕ್ಕೆ ಸಲೀಸು ದಕ್ಕಿ
ಸತ್ಯ ಪ್ರತ್ಯಕ್ಷವೆ ಅದಕ್ಕೆ ?
ಕಡಿಸಿಕೊಳ್ಳುವ ನೋವು ಕಡಿಯುವ ಜೀವಕ್ಕಿರದ
ಸ್ಥಿತಿ ಮರ್ತ್ಯಮಾತ್ರವೆ ?
ಮೂಲಪ್ರಜ್ಞೆಯ ಬಿಂಬ
ಕೋಟಿ ಚೂರುಗಳಾಗಿ
ಹಿರಿಕಡಲು ಹನಿಹನಿಗಳಾಗಿ ಒಡೆದ ವಿಕಾರ
ಗುರುತಿಸಿದರೂ ನಿಜವ ರುಚಿಯಲ್ಲಿ, ಹನಿಗೆಲ್ಲಿ
ಹಡಗುಗಳ ತೇಲಿಸುವ ಅಧಿಕಾರ ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಗುವಿತ್ತು ಹೂವಂತ ಮಾತಿತ್ತು
Next post ನಂಬಿಕೆಯೇ ದೇವರು

ಸಣ್ಣ ಕತೆ

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

cheap jordans|wholesale air max|wholesale jordans|wholesale jewelry|wholesale jerseys