ಇದಲ್ಲ ತಕ್ಕ ಗಳಿಗೆ

ಗಾಳಿ ಕೂಗುತ್ತಿದೆ
ಕಡಲು ಮೊರೆಯುತ್ತಿದೆ
ಮರ ಗಿಡ ತೋಟ ಗದ್ದೆ
ತಲ್ಲಣಿಸಿ ತೂಗಿ
ನೆಲಕ್ಕೆ ಒಲೆಯುತ್ತಿದೆ,
ಮೇಘದ ಕಪ್ಪು ಸಲಗಗಳ ದಾಳಿಗೆ ಬೆದರಿ
ಬೆಳಕು ತುರಾತುರಿ ತಳ ಕಿತ್ತಿದೆ
ಚಚ್ಚಿದೆ ಮಳೆ
ಬೆಚ್ಚಿದೆ ಇಳೆ
ಹುಚ್ಚೇರುತ್ತಿದೆ ಆಗಲೇ
ಹೆಚ್ಚಿಹೋಗಿರುವ ಹೊಳೆಗಳಿಗೆ,
ಮುಚ್ಚುತ್ತಿದೆ ದಪ್ಪನೆಯ ಕಪ್ಪುರಗ್ಗು ನೆಲವನ್ನು
ಆ ತುದಿಯಿಂದ ಈ ತುದಿವರೆಗೆ.

ಮಗೂ
ಈ ಆಬ್ಬರದಲ್ಲಿ ನಿನ್ನ ಹಂಸಧ್ವನಿ
ಕೇಳುತ್ತದೆ ಹೇಳು ಯಾರ ಕಿವಿಗೆ ?
ಗಂಟೆ ಬಾರಿಸುತಿರಲು ತಂತಿ ಮಿಂಚಿದ ಗಾನ
ಕಂತಿಹೋಗದೆ ಹೇಳು ಮೊರೆತದೊಳಗೆ ?
ಆದರೂ ಚಿಂತಿಲ್ಲ
ಸರದಿಗಳು ಉಂಟಲ್ಲ!
ನುಡಿತವನ್ನೇ ಬಿಟ್ಟುಕೊಡುವ ಗೋಜಿಲ್ಲ.
ನಡೆಯುತ್ತಿರಲಿ ಸಾಧನೆ ತನ್ನಷ್ಟಕ್ಕೆ
ಒಳಗೊಳಗೆ,
ತಿಳಿದಿರಲಿ ಜೊತೆಗೆ
ಮೆಚ್ಚಿಗೆ ನಿರೀಕ್ಷಿಸಲು ನಿನ್ನ ಕಲೆಗೆ
ಇದಲ್ಲ ತಕ್ಕ ಗಳಿಗೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಳಿಗೆಬಟ್ಟಲ ತಿರುವುಗಳಲ್ಲಿ – ೨೮
Next post ಸಹೃದಯಿ ಕೆ. ವೆಂಕಣಾಚಾರ್

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

cheap jordans|wholesale air max|wholesale jordans|wholesale jewelry|wholesale jerseys