ಶರೀಫಜ್ಜನಿಗೆ

ಒಂದು ಧರ್ಮಕ್ಕೆ ಮೊಳೆತು
ಇನ್ನೊಂದರಲಿ ಫಲಿತು
ಸಾರ ಒಂದೇ ಎಂದು ಹಾಡಿದಾತ;
ಹನಿಸೇರಿ ಹೊಳೆಯಾಗಿ
ಗುರಿ ಸೇರಿ ಕಡಲಾಗಿ
ನಭವೇರಿ ಮುಗಿಲಾಗಿ ಆಡಿದಾತ;
ಹತ್ತು ವನಗಳ ಸುತ್ತಿ
ಹೂ ಹೂವನೂ ಮುತ್ತಿ
ಒಂದೆ ಜೇನಿನ ಹುಟ್ಟು ಕಟ್ಟಿದಾತ;
ಎಲ್ಲಿ ಹೇಳೋ ತಾತ
ಹಿಂದೆ ಯಾ ಅವಧೂತ
ಸಾಧಿಸಿದ ನಿನ್ನಂತೆ ಧರ್ಮವನ್ನು
ಕಾವ್ಯದಲಿ ಕೆಡೆದ ಆ ಮರ್ಮವನ್ನು ?

ಸೃಷ್ಟಿ ಮರೆಸಿಟ್ಟಿರುವ ಗುಟ್ಟುಗಳನು
ಸಪ್ತಸ್ವರದಾಚೆಯಾ ಮಟ್ಟುಗಳನು
ನಿನ್ನ ನುಡಿಯಲ್ಲಿಟ್ಟೆ
ಭಾಷೆಗರ್ಥವ ಕೊಟ್ಟೆ
ಹಾಡು ಮಾಡಿದೆ ನಿನ್ನ ವ್ಯಥೆಗಳನ್ನು
ಹೇಳು ಹೇಳು ಶರೀಫ
ಹಿಂದೆ ಯಾವ ಖಲೀಫ
ಏರಿದ್ದ ಈ ಹೊನ್ನಿನಟ್ಟವನ್ನು,
ಮಣಿಸಿದ್ದ ಮಾತುಗಳ ಬೆಟ್ಟವನ್ನು ?

ಏನು ಜೀವನಧರ್ಮ
ಏನು ಸೃಷ್ಟಿಯ ಮರ್ಮ
ಏನು ಎಲ್ಲಿ ಯಾಕೆ ತಾಕಿದವನು;
ಬೆಟ್ಟ ಬೆಟ್ಟವ ಕುಲುಕಿ
ಸಪ್ತಸಾಗರ ಕಲಕಿ
ಸೃಷ್ಟಿಮೂಲವ ಹುಡುಕಿ ಜೀಕಿದವನು;
ಹೇಳು ಹೇಳು ಶರೀಫ
ಬೇರೊಬ್ಬ ಯಾರವನು
ನಿನ್ನಂತೆ ನಡೆನುಡಿಯ ಕಾಡಿದವನು?
ತೀರದಾಚೆಯ ತಾರೆ ಕೂಡಿದವನು?

ಅನ್ನ ನೆಲ ಮಾತು ಮತ
ಎಲ್ಲ ಹೊರತಾದರೂ
ಪ್ರೀತಿಯಲಿ ಅವನೆಲ್ಲ ಕಲೆಸಿಬಿಟ್ಟೆ;
ಬಣ್ಣ ಏಳಾದರೂ
ಒಂದೆ ಕಾಮನಬಿಲ್ಲು
ಚಂದವಾದಂತೆ ನೀ ಬಾಳಿಬಿಟ್ಟೆ;
ಗಡಿಮೀರಿ ಮಡಿ ಮೀರಿ
ಬಾನಿನಲಿ ಕುಡಿಯೂರಿ
ಗಾಳಿಯಲಿ ಬಾಳಪಟ ತೇಲಿಬಿಟ್ಟೆ;
ಹೇಳು ಹೇಳು ಶರೀಫ
ಯಾವ ಭಾವಕಲಾಪ
ಇಂಥ ಬಿಡುಗಡೆ ಕೊಟ್ಟ ಸೂತ್ರವಾಯ್ತು – ಹೇಗೆ
ಬರಿ ನೀರು ಪರಿಶುದ್ಧ ತೀರ್ಥವಾಯ್ತು?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಳಿಗೆಬಟ್ಟಲ ತಿರುವುಗಳಲ್ಲಿ – ೪೦
Next post ರಾಷ್ಟ್ರ ಪಕ್ಷಿ: ನವಿಲು

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಕರಿ ನಾಗರಗಳು

    ಚಿತ್ರ: ಆಂಬರ್‍ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್‌ ನೀರು ಹರಿಯುತ್ತಿದ್ದ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

cheap jordans|wholesale air max|wholesale jordans|wholesale jewelry|wholesale jerseys