ಚೋಳ ಕಡಿತು ನನಗೊಂದು

ಚೋಳ ಕಡಿತು ನನಗೊಂದು ಚೋಳ ಕಡಿತು
ಕಾಳಕತ್ತಲದೊಳಗ ಕೂತಿತ್ತು ನನಕಂಡು ಬಂತು || ಪ ||

ಎಷ್ಟು ದಿನದ ಸಿಟ್ಟು ಇಟ್ಟಿತ್ತು ತೀರಿಸಿಬಿಟ್ಟಿತು
ಯಾರಿಗೆ ಹೇಳಿದರ ಏನ ಆದೀತು
ಗುರುತಾತು ಈ ಮಾತು
ಹುಟ್ಟಿದ ಮಗಳು ಕಂಡಿದ್ಧಿಲ್ಲ
ಇದರ ಕಷ್ಟ ಶಿವನೇ ಬಲ್ಲ
ಘಟ್ಟಿಯಾಗಿ ಮುಳ್ಳು ಚುಚ್ಚಿತ್ತು ಮಾಯವಾಗಿ ಹೋತು || ೧ ||

ಮೂರು ದೇಹದೊಳಗೆ ತಾನಿತ್ತ
ಪರಮಾತ್ಮನಾದದೊಳು ತಾನು ಬೆಳದಿತ್ತ
ಸಾರಿಬಂದು ಎನ್ನನೋಡುತ
ಮೂರು ಲೋಕ ಬೆಳಗು ಮೇಲು ಮೀರಿದುನ್ಮನಿ ಹಾರಿ ನಿ೦ತಿತು || ೨ ||

ದೇವರಮನಿ ಮೂಲೆಯೊಳಗಿತ್ತು
ಆಧಾರ ಹಿಡಿದು ಊಧ್ವ೯ಮುಖದಿ ಕೊಂಡಿ ಮಾಡಿತ್ತು
ಕಾಲ ಕಳೆದು ಸ್ಥೂಲದೇಹದೊಳಗ ಮಲಗಿತ್ತು
ಕಲಿಕಮ೯ ನುಂಗಿತ್ತು
ದೇವಶಿಶುನಾಳಧೀಶನ ಧ್ಯಾನದೊಳಗಾ ಚೋಳು ಇತ್ತು
ಕಚ್ಚುತಿರಲು ಎಚ್ಚರಾದಿತು ಹುಚ್ಚು ಹಿಡಿದಂಗಾತು ||೩||

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಾಗಿಲು ತೆಗೆ ಮಗೂ
Next post ಅಂತರಂಗದ ಅಕ್ಷರಮಾಲೆ

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

cheap jordans|wholesale air max|wholesale jordans|wholesale jewelry|wholesale jerseys