ಪುಣ್ಯಶಾಲಿ

ನೀವೆಲ್ಲ ಪುಣ್ಯಶಾಲಿಗಳಮ್ಮ
ಹಠತೊಟ್ಟು ಬೈಗಳಿಂ ಕೋಪದಿಂ
ಕೋರಿಕೆಯ ಸಾಧಿಪಿರಿ, ಸುಖಿಸುವಿರಿ
ಒಡವೆ ವಸ್ತುವ ಪಡೆದು ಮೆರೆಯುವಿರಿ.
ಎನ್ನಲ್ಲಿ ಹರವಿಲ್ಲ ಮುನಿಸಿಲ್ಲ
ಬೈಗಳಂ ಮುನ್ನ ನಾ ಕಲಿತಿಲ್ಲ
ಅಸುವೊಂದು ದೇಹವೆರಡಾಗಿಹುದು
ಎಂದು ಸಂಸಾರ ನಡೆಸುವೆನಮ್ಮ.

ಎನ್ನ ಪತಿ ಮನೆಗೆ ಬರೆ ಮುಗುಳು ನಗೆ ಸೂಸುವೆನು
ಬಂದವರನುಪಚರಿಸಿ ನಲ್ನುಡಿಯ ನುಡಿಯುವೆನು
ಏಕಾಂತದಲ್ಲಿ ಮೆಲ್ಲನವರ ಬಳಿ ಸಾರುವೆನು
ತನಿವಣ್ಣು ಕೆನೆವಾಲು ತಾಂಬೂಲ ನೀಡುವೆನು.
ವಿನಯದಿಂ ಮೃದು ಮಧುರವಾಣಿಯಂ
“ಎಲೆ ನಲ್ಲ! ಮಾತೊಂದು ನಡೆಸುವೆಯ
ಕೇಳಲೋ ಬೇಡವೋ” ಎನ್ನುವೆನು.

ಒಡನವರು ನಗುನಗುತ
ಬರ ಸೆಳೆದು ಬಿಗಿದಪ್ಪಿ
“ಎಲೆ ದೇವಿ! ಎನ್ನುವರು
ಹೂಮಳೆಯ ಸುರಿಯುವರು
ಜಡೆ ಮುಡಿಯ ನೇವರಿಸಿ
ಬಳಿಯಲ್ಲಿ ಕುಳ್ಳಿರಿಸಿ
ತಂದೆತಾಯ್ಗಳ ಬಿಟ್ಟು ಬಂದಿರುವೆ
ಒಡಹುಟ್ಟಿದರ ಬಿಟ್ಟು ಬಂದಿರುವೆ
ನಾನೆ ಪರಮಾರಾಧ್ಯನೆಂದೆಂದು
ಕನಸಿನಲಿ ನೆನೆಸಿನಲಿ ತಿಳಿದಿರುವೆ
ಕುಸುಮ ಕೋಮಲ ಹೃದಯದಲಿ ಬಯಕೆ ಏನಿಹುದೊ
ಏನಿಹುದೊ ಈ ಎನ್ನ ಗೃಹಲಕ್ಷ್ಮಿ ಹೃದಯದಲಿ !
ರಾಣಿಯಲ್ಲವೆ ನೀನು
ನಾನು ನಿನ್ನಯ ತೊತ್ತು
ಸರ್ವಸ್ವ ನಿನಗಿರಲು
ಸರ್ವಾಧಿಕಾರಮಂ
ನಿನಗೆ ನಾ ಕೊಟ್ಟಿರಲು
ಎನ್ನ ಬೇಡಲದೇಕೆ ?”
ಎಂದೆನ್ನ ಆದರಿಸಿ ನುಡಿಯುವರು
ಕೊರಳ ಸರಿಗೆಯ ಕೀಲಿ ತೋರುವರು.

ಪ್ರೇಮ ಭಾಂಡಾಗಾರ ಎನಗಿರಲು
ಕನಕ ಭಾಂಡಾಗಾರ ಎನಗಿರಲು
ಎಲ್ಲವುಂ ಎನ್ನ ಕೈಯೊಳಗಿರಲು
ಒಪ್ಪದಲ್ಲಿ ಸಂಸಾರ ನಡೆಸುತಿರೆ
ಶಾಂತಿ ಸುಖ ನಗುವೆಲ್ಲ ತುಂಬುತಿರೆ
ಒಡವೆ ವಸ್ತುವನಿಟ್ಟು ಮೆರೆಯದಿರೆ
ಏನು ಕುಂದಪ್ಪುದೋ ನಾನರಿಯೆನಮ್ಮ ;
ನೀವೆಲ್ಲ ಪುಣ್ಯಶಾಲಿಗಳಮ್ಮ
ಎನಗೇನು ಆ ಪುಣ್ಯ ಬೇಡಮ್ಮ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೇವರಿದ್ದಾನೆ
Next post ಅಮ್ಮ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

cheap jordans|wholesale air max|wholesale jordans|wholesale jewelry|wholesale jerseys