ವೇದಾಂತ

ವೇದಾಂತ ಹೇಳಬಹುದು
ಎಲ್ಲರೂ ಕೇಳಬಹುದು
ಶಾಲನ್ನು ಸುತ್ತಿಕೊಂಡು
ಬಿರುದನ್ನು ಧರಿಸಿಕೊಂಡು
ವ್ಯಾಖ್ಯಾನ ಮಾಡಬಹುದು
ಪುಸ್ತಕವ ಬರೆಯಬಹುದು
ವೇದಾಂತ ಸಮಯಕ್ಕೆ ಬರುವುದೇನು ?
ಕರುಳನ್ನು ಸಂತವಿಡಲಪ್ಪುದೇನು ?

ಕಷ್ಟಗಳು ಬಂದು ಮುತ್ತಿ
ದುಃಖಗಳು ಬಂದು ಒತ್ತಿ
ರೋಗಗಳು ಬಂದು ಹತ್ತಿ
ಸಾಲಗಳು ಬಂದು ಸುತ್ತಿ
ಕಣ್ಕಣು ಬಿಡುತಲಾಗ
ಮತಿಗೆಟ್ಟು ಹೋಗುವಾಗ
ವೇದಾಂತ ಬರುವುದನ್ನು ನೋಡಬೇಕು
ವೇದಾಂತ ನುಡಿವುದನು ಕೇಳಬೇಕು.
ತಾನಿದ್ದು ಮುದುಕನಾಗಿ
ಬೆಳೆದ ಮಗ ತೀರಿಹೋಗಿ
ಮೊಮ್ಮಗನು ಬಳಿಗೆ ಬಂದು
ಬೆಪ್ಪಾಗಿಯಳುತ ನಿಂದು
ಬಸಿರೆಲ್ಲ ಕುದಿಯುವಾಗ
ಕೊರಳ ಸೆರೆ ಬಿಗಿಯುವಾಗ
ಹೆಣವನ್ನು ಸುಡುಗಾಡಿಗೊಯ್ಯುವಾಗ
ಚಿಕ್ಕ ಸೊಸೆ ಮುಸುಕಿಟ್ಟು ಕೊರಗುವಾಗ;

ಮುಡುಪನ್ನು ಕಟ್ಟಿ ತಂದು
ಮುದ್ದು ಮಗಳಳುತ ನಿಂದು
ಪತಿಭಿಕ್ಷೆ ಬೇಡಲಾಗಿ
ಕಡೆಗೆಲ್ಲ ತೀರಲಾಗಿ
ತನ್ನ ಪತಿ ಹೋದನೆಂದು
ತನ್ನ ಬಾಳ್ ಮುಗಿಯಿತೆಂದು
ನೆಲದಲ್ಲಿ ಮೈಮರೆದು ಬೀಳುವಾಗ
ಕಣ್ಣೊಡೆದು ಎದೆಬಿಚ್ಚಿ ನೋಡುವಾಗ;

ಮುದ್ದಾಡಿ ಬೆಳಸಿದಂಥ
ಮನೆಯೆಲ್ಲ ಬೆಳಗಿದಂಥ
ಮಗುವನ್ನು ಮೃತ್ಯು ಹಿಡಿದು
ಹೆತ್ತವಳು ಬಸಿರು ಹಿಡಿದು
“ಎನ್ನ ಕಂದನ್ನ ಕೊಡಿರಿ
ಎನ್ನ ರತ್ನನ್ನ ಕೊಡಿರಿ”
ಎಂದಂದು ಬಿಕ್ಕುತ್ತ ಕೇಳುವಾಗ
ತೊಡೆ ಮೇಲೆ ಜೀವವದು ನಂದುವಾಗ;

ಊರಾಚೆ ಗುಣಿಯ ತೊಡಿ
ಇಡಲಲ್ಲಿ ಅಣಿಯ ಮಾಡಿ
‘ಬದುಕಿದೆಯೊ ಏನೋ!’ ಎಂದು
ಭ್ರಮೆಯಿಂದ ಆಸೆ ಬಂದು
ಮತ್ತೊಮ್ಮೆ ಮುಟ್ಟಿ ನೋಡಿ
ಕಡೆಗೊಮ್ಮೆ ಮುಖವ ನೋಡಿ
ಮಣ್ಣಿಂದ ಕಂದನ್ನ ಮುಚ್ಚುವಾಗ
ಜಗವೆಲ್ಲ ಕಣ್ಗಂದು ಸುತ್ತುವಾಗ;

ಇವರಾರ ಮಕ್ಕಳೆಂದು
ಅವರಾರ ನೆಂಟರೆಂದು
ಋಣ ಶೇಷ ತೀರಿತೆಂದು
ಸಾಲಿಗರು ಹೋದರೆಂದು
ಕಣ್ಣೀರು ಬತ್ತಿಸುತ್ತ
ಎದೆ ಕಲ್ಲು ಮಾಡಿಸುತ್ತ
ವೇದಾಂತ ! ವೇದಾಂತ ! ಇರುವುದೇನು
ಇದ್ದರೂ ಅದರಿಂದ ಬಂದುದೇನು ?

ಕಲ್ಲೆದೆಯ ನೀರುಮಾಡಿ
ಕಣ್ಣೀರು ಹರಿದು ಕೋಡಿ
ಮಾಲಿನ್ಯ ಹೋಗುತಿರಲು
ಕರುಣ ರಸ ತುಂಬುತಿರಲು
ಆರ್ತರಿಗೆ ಮರುಗುವಂತೆ
ಕೈನೀಡಿ ಸಲಹುವಂತೆ
ವೇದಾಂತ ನಮಗೆಲ್ಲ ತಿಳಿವ ತರಲಿ
ಶುದ್ಧಾತ್ಮ ಮಾನವರ ಮಾಡುತಿರಲಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವ್ಯತ್ಯಾಸ
Next post ಲಡಾಯಿ

ಸಣ್ಣ ಕತೆ

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

cheap jordans|wholesale air max|wholesale jordans|wholesale jewelry|wholesale jerseys