ಚಂಡಿಗೆ ಮೊರೆ

ಚಂಡಿ! ನೀ ಗುಣವಂತೆ ಬರಿದೆ ದೂರಿದನವನು,
ಮುದಿಗೂಬೆ ಹೇಳಿದುದೆ ಲೋಕಮೆಚ್ಚಿಕೆಯಾಯ್ತು
ಕಂಡ ಕಂಡವರೆಲ್ಲ ಚಂಡಿತನವೆನಲಾಯ್ತು.
ನಿನ್ನಂಥ ಸುಗುಣಿಗಳು ಈಗೆಲ್ಲಿ ದೊರೆಯುವರು !
ವಿಧಿಯ ಕಾರ್ಪಣ್ಯವಂ ಸೃಷ್ಟಿ ವೈರಸ್ಯವಂ
ಈ ಯುಗದ ಹೆಂಗಳಂ ಬಣ್ಣಿಸಲುಮಳವಲ್ಲ.
ಬಾರೆಂದೊಡಂ ಇಲ್ಲ ಹೋಗೆಂದೊಡಂ ಇಲ್ಲ
ಬೇಕೆಂದೊಡಂ ಇಲ್ಲ ಬೇಡೆಂದೊಡಂ ಇಲ್ಲ
ಕಪ್ಪಕಾಣಿಕೆಗಿಲ್ಲ ನಲ್ನುಡಿಗೆ ಮೊದಲಿಲ್ಲ
ಕೋಪತಾಪಕುಮಿಲ್ಲ ಬೇಡಿಕೆಗೆ ಮುನ್ನಿಲ್ಲ
ಏನೇನ ಪೇಳ್ದೊಡಂ ಅವರಲ್ಲಿ ನಿಷ್ಪಲಂ
ಅವರ ಕೈವಿಡಿದರ್ಗೆ ಇಹದಿ ನಾಯಕ ನರಕ.
ಜಗದ ಮೊಂಡುಗಳೆಲ್ಲ ಒಳಸಂಚು ಮಾಡಿಹರೊ
ಹಿರಿಯ ಗುರು ಬೋಧಕಳು ಆವ ದೇವತೆಯಿಹಳೊ
ಇಂತಿರಲು ಮಾತಾಯಿ ಎಂತಿಹಳೊ
ಇದ್ದಿದ್ದು ಆಕೆಗೇನಪರಾಧ ಮಾಡಿದೆವೋ !
ನಿನ್ನ ಗುಣವರಿತರಿತು ವಿಪರೀತಮಂ ನುಡಿದು
ಬಾಳಲಾರದೆ ತಾನು ಕೋಪದಿಂ ಶಾಪಮಂ
ಕೊಟ್ಟ ತಾಪಸನನುದ್ದಾಲಕನ ಬುದ್ದಿಯಂ
ದುರ್ಬುದ್ದಿಯಂ ಜರೆದು ನಿನ್ನ ಮನ್ನಿ ಸರಮ್ಮ !
ಸೂರ್ಯೋದಯಕೆ ಚನ್ನ ಕೋವಳೆಯು ನಗಲೇನೊ
ಚಂದ್ರೋದಯಕೆ ಚನ್ನ ತಾವರೆಯು ನಗಲೇನೊ
ನಿಯಮ ಪಲ್ಲಟವಾಗಿ ಬೇರೊಂದು ವಿಧಿಯಾಗಿ
ಬೆಳಗಿದೊಡೆ ಸಾಲದೇಂ ? ನೀನಿಂದು ಬಾರಮ್ಮ !
ನಿನ್ನ ಸುಗುಣದ ಸಿರಿಯ, ನಿನ್ನ ಘನತರ ವಿಧಿಯ
ಈ ಹೆಂಗಳಿಗೆ ತೋರಿ ಗುಣವಂತೆಯೆನಿಸಮ್ಮ.
ಅವರಲ್ಪ ಸಂಸಾರವಂ ದುಃಖಸಾಗರವ
ನಿನ್ನೊಲುಮೆಯಂ ಬೀರಿ ಸುಖಜಲಧಿ ಮಾಡಮ್ಮ !
ಕಣ್ಣೀರ ಕೋಡಿಗಳು ಚಿಂತಾಗ್ನಿ ನಂದಿಲ್ಲ
ಕಲಿತ ವಿದ್ಯೆಗಳಿಂದ ಅಜ್ಞಾನವಳಿದಿಲ್ಲ
ಲೋಕವಾಳಿದೊಡೇನು ಆಳಾಗಲೊಪ್ಪುವರು
ಶಾಂತಿ ದೊರೆತೊಡೆ ಸಾಕು, ಏನಾದರಾಗುವರು ;
ಆಳಲ್ಲ ಅರಸ ಏನುಮಂ ಸೈರಿಸರು
ಪತಿಯ ಬಾಳ್ಕೆಯ ಲತೆಗೆ ವಿಷವಾಗಿ ಹರಿಯುವರು
ಅವರ ಹರುಷದ ಗುಡಿಗೆ ಸಿಡಿಲಾಗಿ ಎರಗುವರು
ಈ ಹೆಂಗಳನು ಕೋಟಿ ಕೌಂಡಿನ್ಯರರಿದಪರೆ
ಬ್ರಹ್ಮಂಗೆ ರುದ್ರಂಗೆ ವಿಷ್ಣುವಿಂಗಳವಲ್ಲ !
ವಿಪರೀತೆಯಾದೊಡಂ ಗುಣವಂತೆ ನೀನಮ್ಮ
ಚಂಡಿಯೆನಿಸಿರ್ದೊಡಂ ಹದಿಬದೆಯು ನೀನಮ್ಮ
ವೇದಜಡ ಛಾಂದಸಂ ಸುಖಿಸಿದಂ ದೂರಿದಂ
ಅರೆಯಾಗಿ ಹೋಗೆಂದು ನೆವಮಿಲ್ಲದುಸುರಿದಂ
ಲೋಕ ನಿನ್ನನು ಹಳಿದು ಮರುಗುವುದು ತಾಪಸಗೆ
ಲೋಕ ಮತವನು ನಚ್ಚಿ ನಡೆಯೆಂದು ನುಡಿಯುವರು
ಎಂತು ನಚ್ಚುವುದೆಂತು ಮೆಚ್ಚುವುದು ವಿಪರೀತ
ಲೋಕಮಂ, ಎಂತು ನಡೆಯುವುದು ನಾನರಿಯೆನಮ್ಮ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರ್‍ದಾಗೆ…
Next post ಪನ್ನೀರು

ಸಣ್ಣ ಕತೆ

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

cheap jordans|wholesale air max|wholesale jordans|wholesale jewelry|wholesale jerseys