ಕಲ್ಯಾಣ

ಜೀವನ ಜೀವನ ಗಂಟು ಹಾಕುವ
ಭಾವವೇ ಕಲ್ಯಾಣವು
ಪ್ರಣಯಿಗಳು ನಿರ್ಮಲದಿ ನಲಿವುದೆ
ಮುಕ್ತಿಗದು ಸೋಪಾನವು

ಸೃಷ್ಟಿ ಇದು ಬಹು ಪಾತ್ರಗಳು ತು-
ಬಿರುವ ನಾಟಕ ರಂಗವು
ಸೂತ್ರಧಾರಿಯು ನಟಿಯು ಪ್ರಥಮದಿ
ಬರುವುದೇ ಕಲ್ಯಾಣವು

ಸತ್ಯವನು ಅನುಸರಿಸುವುದೆ ಈ
ನಾಟಕದ ಪರಮಾರ್ಥವು
ನೀತಿಮಾರ್ಗದಿ ವಿಜಯ ಹೊಂದುವ
ನ್ಯಾಸವೇ ಕಲ್ಯಾಣವು

ತತ್ವವೆಲ್ಲವು ದಾಂಪತ್ಯದಿ
ಆಳವನು ಹೊಕ್ಕಂತೆ ದೊರೆವುದು
ಸವಿ ಮಧುವು ಕಲ್ಯಾಣದಿ

ಎರಡನೊಂದಾಗಿಸುವ ಸಂಗಮ
ಕ್ಷೇತ್ರವೀ ಸಂಸಾರವು
ದ್ವೈತದೊಳಗದ್ವೈತ ಮಹಿಮೆಯ
ತಿಳಿವುದೇ ಕಲ್ಯಾಣವು

ತಾನ ತಾನದ ಲಹರಿ ಎಬ್ಬಿಸಿ
ತೂರಿರೈ ನವವಧುಗಳೆ!
ಕುಲುಕಿ ಬಳುಕುತ ನೃತ್ಯಮಾಡಿರಿ
ಪ್ರಕೃತಿದೇವಿಯ ಮಡಿಲೊಳು

ಬಾಸಿಗದ ಮದುವಣಿಗರನು ಶುಭ
ವೆಂದು ಹರಸುತ ಮುದದೊಳು
ಮದುವೆ ಹಂದರದೊಳಗೆ ಜನಕಜೆ
ಇಂತು ಮಂಗಳವೆಂದಳು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾಚಿಕೆಯೆ ಹೀಗೇಕೆ ಹಗೆಯಾಯಿತು
Next post ಆಸೆ

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

cheap jordans|wholesale air max|wholesale jordans|wholesale jewelry|wholesale jerseys