ಶ್ರೀ ದೇವಿ ದಂಡಕ

ಜಯ ಜಯತು ಜಗದಾಂಬೆ ಭಕ್ತರ ಕುಟುಂಬೆ
ಜಯ ಜಯತು ಜಗದಾಂಬೆ ಸಾಂಬೆ
ತ್ರಯ ಜಗವನೆಡಬಿಡದೆ ತುಂಬೆ ನಯ
ವಿನಯಗುಣ ಗಣಕದಂಬೆ
ಭಯ ಭಕ್ತಿಯಿಂ ಬೇಡಿಕೊಂಬೆ ||ಅ.ಪ||

ಏನು ಇಲ್ಲದಲಂದು ಓಂಕಾರ ಪ್ರಣಮದಿ
ನೀನು ಮೂಲದಿ ಬಂದು
ಅ-ಉ-ಮಾಕಾರವೆ ಸಾನುರಾಗದಿ ನಿಂದು ಜ್ಞಾನೌಘಸಿಂಧು
ತಾನೆ ಸ್ಥೂಲತಿಸೂಕ್ಷ್ಮಕಾರಣ
ಬಾನು ಬಹುರುಚಿ ವಿಶ್ವತೈಜಸವ
ಮಾನ ಪ್ರಜ್ಞಾನಿಸುವ ಜನನಿ ಮೌನ
ರಾಜಸ ಸತ್ವ ತಾಮಸ ಏನು ಇಲ್ದಿರಲಾಗ
ಅಜ ವಿಷ್ಣು ರುದ್ರರು ನಿನ್ನ ಸ್ಥುತಿಸಲು ಬೇಗ
ಪದರೇಣುವನು ಕೃಪೆಯಿಂದ ಪಾಲಿಸಿದಾಗ ಆನಂದ ರಾಗ
ಮಾನ ನಿಧಿ ಉತ್ಪತ್ಯ ಸ್ಥಿತಿ ಲಯ
ಮೌನಮುದ್ರಿ ಸಮಾಧಿಭೇದವು
ಭಾನುವಿನ ಓಲ್ ಬೆಳಗು ಮುಸುಗುವ-
ದೇನು ನಿನ್ನಾಧೀನ ತ್ರೈಜಗ
ನೀನೆ ನೀನೆಯು ತತ್ವ ಕಲ್ಪನೆ
ನೀನೆಯೆಂಬೆನು ಗಹನ ನಾನೆನೆ
ನಾನು ರಹಿತ ನಿರಾಳದೇವಿಗೆ ಜಯ ಜಯತು ಜಗದಾಂಬೆ ||೧||

ಓಂಕಾರಿ ಶರ್ವಾಣಿ ಆಖಳಾಂಡ ಜಗಮಯೆ
ಝೇಂಕಾರಿ ಸತ್ರಾಣಿ ಜಡಮೂಢ ಶುಂಭರ
ಹಂಕಾರಿ ನಿರ್ವಾಣಿ ಕಿಂಕರಪ್ರಾಣಿ
ಶಂಕರಿಯು ಶಿವೆ ಶಾಂಭವಿಯೆಂಬೆನಲು
ಭೀಂಕರಿಯು ಮಧುಕೈಟಭ್ರಾಂತಕಿ
ಓಂಕಾರಿಯು ಮಧುಪೀವಿರಕ್ತಬೀ-
ಜಾಂಕ ಮೂಲಕೆ ಕಾಲಭೈರವಿ
ಅಂಕ ವಿಜಯ ಶರಾಳಿ ಪ್ರತಿವೀರ-
ಗಂಕಣ ವಿಮಲ ಹಸ್ತಕರಾಳಿ ಧೀಂಕರವತಾಳಿ
ನೂಂಕಿ ಮಹಿಷನ ದಾಳಿ ಧೀಂಕರವತಾಳಿ
ಠೇಂಕರಿಸಿ ನಿಶಿಂಜಿನಿಧ್ವನಿ
ಭೋಂಕರಿಸಿ ವರಸಿಂಹ ನಾದದಿ
ಕೇಂಕರಿಸಿ ಹರಿ ಹವಕೆ ಹಾರಿದಿ
ಮುಂಕರಿದು ಮೃತವಾದದನುಜರ
ಆ೦ಕಿಲಾಲ ಕಿಲಾಲ ಕಿಲಿಕಿಲಿ
ಓಂ ಕಿಂ ಸೋಹಂ
ಸರ್ವದೇವರ ದೇವಿಗೆ ಜಯ ಜಯತು ಜಗದಾಂಚಿ ||೨||

ಸಕಲ ಲೋಕದ ಮಾತೆ ಪರಬ್ರಹ್ಮ ಮೂಲವೆ
ಪ್ರಕೃತಿ ನಿನ್ನಿಂದಾಯ್ತೆ ಪಂಚಾದಿ ತತ್ವವು
ವಿಕೃತಿ ನಿನ್ನಿಂ ಪೋಯೇ ನೀಂ ಪೃಥ್ವಿ ದೇವತೆ
ಥಕ ಥಕನೆ ಕುಣಿಸಿದೀ ಜಗವಖಿಲ ಸೂತ್ರದ ಬೊಂಬೆ ತೆರದಲಿ
ಸುಖ ವಿಲಾಸಿಯೆ ಬಹಳ ಮಾಯದಿ
ಪ್ರಕಟಿಸಿದೆ ಆಕಾಶ ನಿಮಿಷಕೆ
ಅಖಿಳ ವೇದಗಳನ್ನು ಇಂದ್ರಾ,ದಿ ಸುರಮುನಿ
ನಿಖಿಳರೂಪಗಳನ್ನು ಈರೇಳು ಭುವನದ
ಭಕ್ತವತ್ಸಲೆ ನೀನು ಮಂತ್ರಾದಿ ದೇವತೆ
ಚಕಿತಗುಣ ಗಣ ಚಂಚಢಾಳಿಯೆ
ರಕುತಬೀಜಾಂಶಾಪಹಾರಿಯೆ
ಕಕುಲತಿಲಿ ಮಹಮುಕ್ತಿದಾಯಕಿ
ಪ್ರಕಟ ಗುರುಗೋವಿಂದನಣುಗಗೆ
ಸುಖ ಸಾಯುಜ್ಯ ಕೊಡುವ
ಸಕಲದೇವರ ದೇವಿ ಪಾದಕೆ ಜಯ ಜಯತು ಜಗದಾಂಬೆ ||೩||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಕೃತಿ ಮತ್ತು ವಿಮರ್ಶಕ
Next post ದೀಪದ ಕಂಬ – ೬ (ಜೀವನ ಚಿತ್ರ)

ಸಣ್ಣ ಕತೆ

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

cheap jordans|wholesale air max|wholesale jordans|wholesale jewelry|wholesale jerseys