ನೀರಿನ ಜಾತ್ರೆ

ಬಳ್ಳಾರಿ ನೀರಿನ ಜಾತ್ರೆ
ನಾನೊಲ್ಲೆ ತಂಗೆಮ್ಮ ಈ ಗಂಗಾಯಾತ್ರೆ
ಕೊಡಗಳ ಪರ್ವತಶ್ರೇಣಿಯ ನೋಡಮ್ಮ
ಒಡಕು ಡಬ್ಬಗಳೇನು ಹಂಡೆಗಳೇನು!

ನೂಕು ನುಗ್ಗುಗಳೇನು, ಹಟದ ಪಂಥಗಳೇನು
ಓಕುಳೀಯಾಡುವ ಸಂರಂಭವೇನು!
ಒಬ್ಬಳ ತುರುಬು ಮತ್ತೊಬ್ಬಳ ಕೆಯ್ಯಲ್ಲಿ
ಅಬ್ಬಬ್ಬ ಇವರಿಗೆ ಈಡೇನೆ ನಾವು?

ಘಟಗಳು ಒಡೆದುವು ಬಳೆಗಳು ಸಿಡಿದುವು
ಹಟಮಾರಿ ಜನಗಳ ಮುಷ್ಕರ ನೋಡೆ!
ಸ್ತ್ರೀಯರ ಪುರುಷರ ವಾಗ್ವಾದ ಕೇಳಮ್ಮ
ನ್ಯಾಯಸ್ಥಾನದ ದೊಡ್ಡ ತೀರ್ಪು ನೋಡಮ್ಮ!

ಸಂತೆಯ ರೈತನು ಬಾಯಾರಿ ಬಂದರೆ
ವಂತಿಲ್ಲ ನಡೆಯೆಂದು ನೂಕುತಲಿಹರು!
ಪ್ರಾಣ ಸಂಕಟವಾಗಿ ನಾಲಿಗೆ ಕಳೆದರು
ನೀನಾರಿಗರುಹುವೆ ನಿಲ್ಲೆಂಬರವರು

ದಯೆಯಿಲ್ಲ ಒಂದಿನಿತು ದಾಕ್ಷಿಣ್ಯ ಮೊದಲಿಲ್ಲ
ನಯವಿಲ್ಲ ಭಯವಿಲ್ಲ ಗಂಗೆಯ ಮುಂದೆ
ಅಳತೆಯ ಭತ್ಯವನುಣ್ಣಲು ಬಹುದಮ್ಮ
ತಿಳಿನೀರ ಭವಣೆಯು ಬೇಡಮ್ಮ

ಅಣಕವಾಡಿದಳೆಂದು ಮುನಿಸುಗೊಳ್ಳುವರೇನೊ
ಜನಕಜೆ ಯತ್ನವೆ ಕವಿತೆಯ ತಡೆವುದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಂದು – ಇಂದು
Next post ಪುಚ್ಚೆ

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

cheap jordans|wholesale air max|wholesale jordans|wholesale jewelry|wholesale jerseys