ಕಾಮ ಇಲ್ಲದ ಮುಂಚೆ

ಕಾಮ ಇಲ್ಲದ ಮುಂಚೆ ಕಾಮ ಆದಿಯಲ್ಲಿ
ಕಾಮಶಾಸ್ತ್ರ ಯಾವಲ್ಲಿತ್ತು
ಕಾಮ ಸುಟ್ಟು ಬಹು ಕಷ್ಟವಾಯಿತು
ರತಿದೇವಿಗೆ ಬಂದಿತು ಹೊತ್ತು
ಭೂಮಿಯೊಳಗ ಆತಿ ಕೌತುಕವಾಯಿತು
ಆ ಮಹಾದೇವರು ಬ್ಯಾಸತ್ತು
ನೇಮ ಹಿಡಿದು ಆ ಹೇಮಕೂಟದಲಿ
ತಾನು ರಹಿತ ಒಂಭತ್ತು ಹೇಮಕೂಟದಲಿ
ಉತ್ಕರಿಸುತ ನದಿ ಭೀಮನಾಂಗ ನೋಡಿ ಬಂದಿತು
ಕ್ಷೇಮದಿಂದ ಸಂಚಾರವು ತಿಳಿಯಲು
ಈ ಮಹಿಮೆ ಯಾರಿಗೆ ಗೊತ್ತು

||ಇಳವು||
ರತಿದೇವಿಯೆಂಬು ಐದು ಅಕ್ಷರಾ
ಮತಿಗೆಟ್ಟು ನಾನಾವಿಕಾರಾ
ಜತಿಗೂಡಿ ಮೆರೆವ ವಿಸ್ತಾರಾ
ಕ್ಷಿತಿಯೊಳಗೆ ಆತೋ ವಿಕಾರಾ
ಸತಿ ಪುರುಷರು ಇಬ್ಬರು ಜರಾ
ಪ್ರತಿಭೂಮಿ ಇರುವದು ಚಮತ್ಕಾರಾ

||ಏರು||
ವೀರ ಪುರುಷರು ವಿಧ್ವಂಸಕ ನೇತ್ರರು
ಸತಿ ಪುರುಷರು ಇಬ್ಬರು ಜತ್ತು
ಕಾಮ ಸುಟ್ಟು ಬಹು ಕಷ್ಟವಾಯಿತು
ರತಿದೇವಿಗೆ ಬಂದಿತು ಹೊತ್ತು ||೧||

ನಾಗಲಿಂಗ ಆಲಿಂಗನ ಕೊಟ್ಟರೆ
ಈಗ ಆತು ಪದ್ಮಿನಿಗೆ ಸುಖಭೋಗ
ವಿಷಯದಾಗ ಮುಖವಿಲ್ಲದೆ ಈ
ಹಸ್ತಿನಿಕಾಲೊಳು ಆತೋ ಸುಖಾ
ಈಗ ಪುರುಷಜಾತಿಗಳು ಮೋಹಿಸಿ
ಮಾನಿನಿಯರು ನೋಡತಾರೋ ಮುಖಾ
ರೋಗ ಬಲಿದು ಏಕಾಗಿ ಅಂದದಿ
ತೆಕ್ಕಿಯೊಳಗೆ ಅಪ್ಪುವದು ಜೋಕಾ
ಸಾರಮನಸ್ಸು ಸಂಯೋಗನಿದ್ರಿ ಕುಚದಾ
ಗಿರಿಯಲಿ ಮಲಗೋದು ಠೀಕಾ
ಮ್ಯಾಗಬಿದ್ದು ಮಾತಾಡಲು ಮನ್ಮಥಾ
ದಾಗರಿಸುತ ನಗುತಿಹನ್ಯಾಕೆ

||ಇಳವು||
ಸಾಗಲಿಕ್ಕೆ ಪಶ್ಚಿಮದ ಭಾಗ
ಅಲ್ಲೇ ಇಡಬೇಕು ಕೈ ಅದರೂಳಗಾ
ಚಾಗನ ಉತ್ತರದ ಲಾಗಾ
ಇರಬೇಕು ದಕ್ಷಿಣದ ತ್ಯಾಗಾ
ಸೋಗಿತಿ ಪೂರ್ವದ ಯೋಗಾ
ತೂಗ್ಯಾಡು ಅನಕಾ ಸಂಯೋಗಾ

||ಏರು||
ಆಗ ಹಿಡಿದು ಅಧರಾಮೃತ ಸವಿಯಲು
ಶ್ರೀ ಗಿರಿಯಲಿ ಉದರಿತ ಮುತ್ತು
ಕಾಮ ಸುಟ್ಟು ಕಷ್ಟವಾಯಿತು ||೨||

ಚಿತ್ತಿನಿ ಜಾತಿಗೆ ಹಸ್ತವು ಮೇಲು
ಹತ್ತಿಪ್ಪತ್ತು ಹಿಡಿ ಹನ್ನೊಂದು ಗೆರಿ
ಹಸ್ತಿನಿ ಮುಖಮಂಡಲ ಕಪೋಲಕ
ಮಸ್ತಕದೊಳಗಿನ ನೀರ ಕೆರಿ
ಉತ್ತಮ ಪದ್ಮಿನಿ ಮತ್ತ ನೋಡಲು
ಎತ್ತಿ ಕಣ್ಣು ಕೈಬೀಸಿ ಕರಿ
ಚಿತ್ತಜನಕರ ಹಸ್ತಿನಿ ಶಂಕಿನಿ
ಮುತ್ತಿಹೊಡೆದರು ಮಾಯಮಾಡಿ
ಮುತ್ತಿಗಾಯಿತಲ್ಲಾ ಮೈಸೂರು ಸೀಮೆಗೆ
ರತ್ನ ಮೇಲೆ ಶಿಶುಪೇಚು ಗರಿ
ಕುಸ್ತಿ ಇಟ್ಟು ಕರಮಸ್ತಕ ಮುಚ್ಚಲು
ಅಳಿಸಿಹೋಯಿತು ಅತಿಲ್ಕವರಿ

||ಇಳವು||
ವಿಸ್ತರವು ಕಾಮಶಾಸ್ತ್ರದಲಿ
ಚಿತ್ತಿರಬೇಕು ಸೂರತದ ಲೀಲಿ
ಗೊತ್ತಿಟ್ಟು ಪ್ರೀತಿ ಧರ್ಮದಲಿ
ಮುತ್ತಿನ ಜ್ಯೋತಿ ರತ್ನದಲಿ

|| ಏರು||
ಸತ್ಯ ಶಿಶುನಾಳಧೀಶನ ಸೇವಕ
ಮತ್ತೆ ಹೇಳಿದ ಮಾತಿನ ಗೊತ್ತು
ಕಾಮಸುಟ್ಟು ಕಷ್ಟವಾಯಿತು
ರತಿದೇವಿಗೆ ಬಂದೀತು ಹೊತ್ತು ||೩||
*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧನ್ಯವಾಯಿತು ಹುಟ್ಟು ಸಾವಿನಲ್ಲಿ
Next post ಸಹೋದರಿ ಮೊರೆ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

cheap jordans|wholesale air max|wholesale jordans|wholesale jewelry|wholesale jerseys