ಕೊಡು ನಿನ್ನ ದುಃಖ

ನನ್ನ ಸೌಂದರ್ಯವನ್ನು
ಮೆಚ್ಚಿಕೊಂಡ ಜನ
ನನ್ನ ಸರಳತೆಯನ್ನು
ಮೆಚ್ಚಿಕೊಂಡ ಜನ
ನನ್ನ ದುಃಖ ಎಷ್ಟೆಂದು ಕೇಳಲಿಲ್ಲ.

ನನ್ನನ್ನು ಪ್ರೀತಿಸಿದ ತಂದೆ
ನನ್ನನ್ನು ಸಲಹಿದ ತಾಯಿ
ನನ್ನ ಆಸೆಗಳೇನು
ಎಂದು ಕೇಳಲಿಲ್ಲ.

ನಾನು ನೀಲಿ ನಕಾಶೆಯೊಳಗೆ
ಹೊಳೆಯುವ ಕನಸುಗಳನ್ನು
ಗುರುತಿಸುತ್ತಿರುವಾಗ
ನನ್ನ ಜೀವದ ಹುಡುಗ
‘ನೀನೆಷ್ಟು ಮುಗುದೆ’
ಎಂದು ವಿಷಾದದಿಂದ ನಕ್ಕ.

ಆವತ್ತೆ ನನಗೆ ಗೊತ್ತಾಯಿತು,
ಈ ಜಗತ್ತಿನಲ್ಲಿರುವುದು
ಕೊಳೆತ ಹೃದಯಗಳು ಮಾತ್ರ.
ಈ ಜಗತ್ತಿನಲ್ಲಿರುವುದು ಹುಳಿತ ಕಣ್ಣುಗಳು ಮಾತ್ರ.

ಅಂದಿನಿಂದಲೆ ನಾನು
ಎಲ್ಲರ ಬಳಿ ಕಣ್ಣೀರು
ಬೇಡಲು ಶುರುಮಾಡಿದೆ.
ಎಲ್ಲರ ಕನಸುಗಳನ್ನು
ಕುತೂಹಲಿಯಾಗಿ ನೋಡಿದೆ.

ನನ್ನೆದೆಯೊಳಗೆ
ಹರಳುಗಟ್ಟುತ್ತಿತ್ತು ದುಃಖ
ಬೆಟ್ಟವಾಗುತ್ತಿತ್ತು ದುಃಖ
ನಾನು ಎಲ್ಲರಿಗೂ ಕೂಗಿ ಹೇಳುತ್ತಿದ್ದೆ
ನೋಡಿ-
ಈ ಬೆಟ್ಟ ಕಣ್ಣೀರಿನದು
ನನ್ನದು ಹಾಗು ನಿಮ್ಮದು.

ಬೆಟ್ಟ ಕರಗಿ ಪ್ರವಾಹವಾಗಿ
ಹರಿಯುತ್ತಿತ್ತು ದುಃಖ.
ನಾನು ಎಲ್ಲರಿಗೂ ಕೂಗಿ ಹೇಳುತ್ತಿದ್ದೆ
ನೋಡಿ-
ಈ ಪ್ರವಾಹ ಕಣ್ಣೀರಿನದು, ನನ್ನದು ಹಾಗೂ ನಿಮ್ಮದು.

ಎಲ್ಲ ನಕ್ಕರು, ಹೊರಟೇ ಹೋದರು.
ನಾನೊಬ್ಬಳೆ ಆಗಿದ್ದೆ
ಜೊತೆಗೆ ಬೆಟ್ಟ-ಪ್ರವಾಹ.

ಕೊನೆಗೂ ನೆನಪಾಯಿತು
ಹೌದು
ಅದು ಅವನದೆ ಮುಖ.
ಅದು ಕೇಳುತ್ತಿತ್ತು
ಕೊಡು ನಿನ್ನ ದುಃಖ
ಕೊಡು ನಿನ್ನ ದುಃಖ.


Previous post ಹೊಸ ವರ್ಷಗಳು
Next post ಪೊಸಗಾರ

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

cheap jordans|wholesale air max|wholesale jordans|wholesale jewelry|wholesale jerseys