ಇರುಳಿನಲ್ಲಿ ಬೆಳಗು


ಸರಿರಾತ್ರಿಯಲ್ಲಿ ಹುಡುಗಿ
ಕನಸು ಕಾಣುತ್ತಿದ್ದಾಳೆ.
ಅವಳ ಕನಸು ಹೀಗಿದೆ:

ಪೇಪರಿನವನ ಚರಪರ
ಚಪ್ಪಲಿ ಸದ್ದಿನಲ್ಲಿ
ಹಾಲಿನವನ ಅವಸರದ ಗುದ್ದಿನಲ್ಲಿ
ಇಬ್ಬನಿಯಲ್ಲಿ ತೊಯ್ದ
ಹೂವಿನೊಡತಿಯ ದನಿಯಲ್ಲಿ
ಬೆಳಗಾಗಿದೆ

ಮುಲ್ಲ ಅಲ್ಲಾನಿಗಾಗಿ
ತುಟಿ ಬಿಚ್ಚಿದ್ದಾನೆ
ಮೈಕಾಸುರ ಮಂಜುನಾಥ
ಎಂದು ಕಿವಿ ಕಚ್ಚುತ್ತಿದ್ದಾನೆ.
ಬಂಗಾರದ ರಥ
ರಿಪೇರಿಗೆ ಹೋಗಿದೆ
ಬರಿಗಾಲಲ್ಲೆ ನಡೆದು ಬಂದ
ಸೂರ್ಯನ ಮುಖ ಕೆಂಪಾಗಿದೆ.

ಗಿಡಗಂಟೆಗಳ ಕೊರಳೊಳಗಿಂದ
ಹೊಮ್ಮಿದ ಹಕ್ಕಿಗಳ ಹಾಡನ್ನು
ಆಕಾಶವಾಣಿ ಮರುಪ್ರಸಾರ
ಮಾಡುತ್ತಿದೆ, ಕೇಳಲು
ತುಂಬಾ ಹಿತವಾಗಿದೆ.


‘ಬೆಳಗಾಯ್ತು’ ಎಂದರಚುತ್ತಾ
ಹುಡುಗಿಯ ಅಮ್ಮ
ತಟ್ಟಿ ಎಬ್ಬಿಸುತ್ತಿದ್ದಾಳೆ.

ಹುಡುಗಿ ಕಿವುಡಿ-
ಅವಳಿಗೆ ಸದ್ದುಗದ್ದಲದಲ್ಲಿ
ಬೆಳಗಾಗುವುದಿಲ್ಲ.

ಹುಡುಗಿ ಕುರುಡಿ-
ಅವಳಿಗೆ ವರ್ಣರಂಜಿತ
ಬೆಳಗು ಕಾಣಲಾಗುವುದಿಲ್ಲ.

ಹುಡುಗಿ ಮೂಗಿ-
ಕನಸನ್ನೇಕೆ ಕಸಿದುಕೊಂಡೆ?
ಎಂದವಳು ಅಮ್ಮನನ್ನು
ಕೇಳುವುದಿಲ್ಲ.

ಸದ್ಯಕ್ಕವಳು ಇರುಳಿನಲ್ಲಿ
ಬೆಳಗಿನ ಕನಸು ಕಂಡ
ಖುಷಿಯಲ್ಲಿದ್ದಾಳೆ.


Previous post ಲಂಚ ತಿನ್ನುವ ಸಮಯ
Next post ಬೆಳಕು

ಸಣ್ಣ ಕತೆ

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

cheap jordans|wholesale air max|wholesale jordans|wholesale jewelry|wholesale jerseys