ಅಳಿವು-ಉಳಿವು

ಬೀಜ ಬೇರೂರಿ
ಕುಡಿ ಇಡುತ್ತಿರುವಾಗಲೇ
ಹತ್ತಿಕೊಂಡಿತ್ತು ಗೆದ್ದಲು
ಬಿಡಿಸಿಕೊಳ್ಳಲು ಹರಸಾಹಸಗೈದರೂ
ತಪ್ಪಿಸಿಕೊಳ್ಳಲು ಆಗಲೇ ಇಲ್ಲ

ಗೆದ್ದಲು ಹಿಡಿದ ಬೀಜ
ಸಾಯುವುದೇ ದಿಟ
ಎಂದುಕೊಂಡರೂ ಹಾಗಾಗಲಿಲ್ಲ
ಉಳಿವಿಗಾಗಿ ಹೋರಾಟ
ತುಸು ಉಸಿರುವವರೆಗೂ
ಚಿಗುರಿಕೊಂಡಿತು
ಬೀಜ ಮೆಲ್ಲನೆ ಗಿಡವಾಗಿ
ಆದರೆ,

“ಒಬ್ಬನ ಕತ್ತು ಇನ್ನೊಬ್ಬನ ತುತ್ತು”
ಹಿಡಿದ ಬೀಜದ ಬಿಡಲೊಲ್ಲದ
ಗೆದ್ದಲು ಕಾಯತೊಡಗಿತ್ತು
ಸಸಿಯ ಕ್ಷೀಣ ಕಾಲವ

ದಿನಕಳೆದಂತೆ ಬತ್ತಿದ ಉತ್ಸಾಹ
ಕುಗ್ಗಿದ ಹುಮ್ಮಸ್ಸು
ಆಸೆಕುಂದಿದ ಸಸಿ
ಬಲಿಯಾಗಿತ್ತು ಗೆದ್ದಲ ಬಾಯಿಗೆ
“ಸಬಲರ ಉಳಿವು ದುರ್ಬಲರ ಅಳಿವು”
ಪ್ರಕೃತಿ ನಿಯಮ

ಬಲಿಮೆದ್ದು ಹಿರಿಮೆಯಲ್ಲಿ
ಮೆರೆದಿತ್ತು ಗೆದ್ದಲು
ಹುತ್ತವ ಮಾಡಿ
ಹೂಡಿತ್ತು ಸಂಸಾರ

ಆದರೆ
ಉರಗವೊಂದು ತೆವಳಿ
ಬಂದಿತ್ತು ನೋಡಿ
ಗೆದ್ದಲ ಗೂಡು
ದಿನ ನಾಲ್ಕು ದೂಡಬಹುದು
ಕಷ್ಟವಿಲ್ಲದೆ ಪಾಡು
ನಡೆಸಿತ್ತು ಗೆದ್ದಲ
ಕೂಡು ಕುಟುಂಬದ
ಮಾರಣ ಹೋಮ

“ಕಾಲಾಯ ತಸ್ಮೈ ನಮಃ”


Previous post ಸ್ವಗತ
Next post ಪೋಸ್ಟರ್ ಬರೆಯುವ ಮಂದಿ

ಸಣ್ಣ ಕತೆ

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

cheap jordans|wholesale air max|wholesale jordans|wholesale jewelry|wholesale jerseys