ಪುಸ್ತಕ ಪ್ರೀತಿ

ಪುಸ್ತಕ ಪ್ರೀತಿ

ಚಿತ್ರ: ಅಲೆಕ್ಸಾಂಡರ್‍ ಸ್ಟಾಕ್ಮಾರ್‍

ಪ್ರಿಯ ಸಖಿ,

ಪುಸ್ತಕದಿ ದೊರೆತರಿವು ಮಸ್ತಕದಿ ತಳೆದಮಣಿ. ಚಿತ್ತದೊಳು ಬೆಳೆದರಿವು ತರು ತಳೆದ ಪುಷ್ಪ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಪುಸ್ತಕ ಜ್ಞಾನವು ಬಹಿರಂಗ ವ್ಯಾಪ್ತಿಯಲ್ಲಿ ಬರುವುದು. ಚಿಂತನೆ ಜನ್ಯವಾದ ಜ್ಞಾನವು ಅಂತರಂಗ ವ್ಯಾಪ್ತಿಯಾದುದು. ನಿಜವೇ ಆದರೆ ಚಿಂತನಶೀಲತೆ ಬೆಳೆಯುವುದು ಪುಸ್ತಕಗಳ ಸಂಪರ್ಕದಿಂದ. ಆದ್ದರಿಂದ ಪುಸ್ತಕಗಳ ಪ್ರಯೋಜನವು ಅಂತರಂಗ ಚೈತನ್ಯದ ಸಾಧನೆಗೆ ಮೊದಲ ಮೆಟ್ಟಿಲು ಎನ್ನಬಹುದು.

ಪುಸ್ತಕಗಳು ಹಲವಾರು ಮಹಾತ್ಮರ ಜೀವನವನ್ನು ರೂಪಿಸಿವೆ. ಹಲವರ ಬದುಕಿನಲ್ಲಿ ಪ್ರಭಾವ ಬೀರಿವೆ. ಕ್ರಾಂತಿಯುಂಟು ಮಾಡಿವೆ. ಬದಲಾವಣೆ ತಂದಿವೆ. ಹೊಸ ವಿಚಾರಗಳನ್ನು ಮೊಳೆಸಿವೆ, ಬೆಳೆಸಿವೆ. ಉತ್ತಮ ಪುಸ್ತಕವನ್ನು ಓದುವವರು ಇರುವವರೆಗೂ
ಈ ಪ್ರಕ್ರಿಯೆಗಳು ಸಾಗುತ್ತಿರುತ್ತವೆ. ಆದರೆ ಇತ್ತೀಚಿನ ದಿನಗಳಲ್ಲಿ ಪುಸ್ತಕಗಳನ್ನು ಓದುತ್ತಿರುವವರು ಕಡಿಮೆಯಾಗುತ್ತಿದ್ದಾರೆ ಎಂಬ ದೂರು ಎಲ್ಲೆಡೆಯಿಂದ ಕೇಳಿ ಬರುತ್ತಿದೆ. ಇದಕ್ಕೆ ಹಲವಾರು ಕಾರಣಗಳೂ ಇವೆ.

ಬದಲಾದ ನಮ್ಮ ಜೀವನ ಶೈಲಿಯಿಂದ ಅವಸರದ ಈ ಯುಗದಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದೆ. ಹಾಗೇ ದೃಶ್ಯ ಮಾಧ್ಯಮಗಳ ಹಾವಳಿಯೂ ಈ ಹವ್ಯಾಸಕ್ಕೆ ನೇರ ಪೆಟ್ಟು ಕೊಟ್ಟಿದೆ. ಹಣವನ್ನು ಮಾಡುವುದೇ ಜೀವನದ ಪ್ರಮುಖ ಗುರಿಯೆಂಬ ಭೂತ ಮಿದುಳನ್ನು ಹೊಕ್ಕಂದಿನಿಂದ ಯಾವ ಹವ್ಯಾಸಗಳಿಗೂ ಈಗ ಜನರಿಗೆ ಬಿಡುವಿಲ್ಲ. ಫ್ಯಾಷನ್, ಐಷಾರಾಮದ ಬದುಕು, ಪಂಚತಾರಾ ಸಂಸ್ಕೃತಿಯೆಡೆಗೆ ಹೆಚ್ಚು ವಾಲುತ್ತಿರುವ ನಮಗೆ ಓದುವುದು, ಗಂಭೀರವಾಗಿ ಯೋಚಿಸುವುದು, ಚಿಂತಿಸುವುದು, ಓದಿದ್ದನ್ನು ಮನನ ಮಾಡುವುದು ಎಲ್ಲವೂ ಬೋರ್ ಎನ್ನಿಸುತ್ತದೆ.

ಪ್ರಿಯ ಸಖಿ, ಆದರೆ ಬೇರೆ ಯಾವ ಮಾಧ್ಯಮವೂ ನೀಡಲಾಗದಂತಹ ಸಂತೋಷವನ್ನು, ಆತ್ಮ ತೃಪ್ತಿಯನ್ನು ಪುಸ್ತಕದ ಓದು ನೀಡುತ್ತದೆ. ಉತ್ತಮ ಪುಸ್ತಕದ ಓದಿನಿಂದ ಮನಸ್ಸು ಅರಳುತ್ತದೆ. ಇದೇ ಓದಿನಿಂದ ನಮಗೆ ದೊರೆಯುವ ಪ್ರತಿಫಲ. ಹಾಗೇ ಎಲ್ಲ ಮಾಧ್ಯಮಗಳಿಗೂ ಮೂಲ ಪುಸ್ತಕಗಳೇ ಎನ್ನುವುದನ್ನು ನಾವು ಮರೆಯುವಂತಿಲ್ಲ. ಅಧ್ಯಾತ್ಮ, ಧಾರ್ಮಿಕ, ತಾತ್ವಿಕ, ಸಾಮಾಜಿಕ, ನೈತಿಕ, ಕೌಟುಂಬಿಕ,
ರಾಜಕೀಯ ಹೀಗೆ ಯಾವುದೇ ವಿಭಾಗದ ಪುಸ್ತಕವಿರಲಿ ಆ ಅಭಿರುಚಿಯಿರುವ ಓದುಗನಿಗೆ ನೆಮ್ಮದಿಯನ್ನು ನೀಡುತ್ತದೆ. ಹೊಸ ಬೆಳಕನ್ನು ಮೂಡಿಸುತ್ತದೆ.

ಸಖಿ, ಪುಸ್ತಕಕ್ಕೆ ಒಂದು ಜನಾಂಗದ ಕಣ್ಣು ತೆರೆಸುವ ಶಕ್ತಿಯಿದೆ. ಆದ್ದರಿಂದಲೇ ನಮ್ಮಲ್ಲಿ ಪುಸ್ತಕ ಪ್ರೀತಿ ಎಷ್ಟು ಬೇಗ ಮೊಳೆಯುತ್ತದೋ ಅಷ್ಟೂ ಒಳ್ಳೆಯದು. ಆ ಪ್ರೀತಿಯಿಂದ ನಾವು ಹೆಚ್ಚು ಹೆಚ್ಚು ಓದುವಂತಾಗಲಿ, ತಿಳಿಯುವಂತಾಗಲಿ, ಆರಳುವಂತಾಗಲಿ, ನೆಮ್ಮದಿ ಕಾಣುವಂತಾಗಲಿ.


Previous post ಹೊಳೆಸಾಲಿನ ಮರ
Next post ಸಂಸಾರ

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

cheap jordans|wholesale air max|wholesale jordans|wholesale jewelry|wholesale jerseys