ಕಾಡುತ್ತವೆ ನೆನಪು

ಹಿತ್ತಲ ಬದಿಯಲಿ ಬೆಳೆದ ಮೂಲಿಕೆಗಳನ್ನು ಆಯ್ದು
ತಂದು ಜೀರಿಗೆ ಬೆರೆಸಿ ಕುದಿಸಿ ಇಡುತ್ತಾಳೆ ಆಕೆ
ತನ್ನ ಕಾಡಿದ ಅದೇ ಬಾಲ್ಯದ ನೋವು
ಇವರ ಕಾಡದಿರಲಿ ಎಂದು.
ಕಾಡುತ್ತವೆ ನೆನಪು

ನಿನ್ನೆ ನೆನೆಯಿಟ್ಟ ಕಾಳುಗಳು ಇಂದು
ಮೊಳಕೆಯೊಡೆದಿವೆ
ಜೋಪಾನವಾಗಿ ತೆಗೆದಿಡುವ ಕೆಲಸವಾಗಬೇಕು.
ಮೊಳಕೆ ಮುರಿಯದಂತೆ ಜಾಗೃತಿಯಲ್ಲಿ,
ದಷ್ಟಪುಷ್ಟ ಸಸಿಗಳು ಧೃಢಮೊಳಕೆಯಿಂದ
ಮಾತ್ರ ಸಾಧ್ಯ-ಎನ್ನುತ್ತಿರುತ್ತಾಳೆ.
ಅದು ಆಕೆಗೆ ಗೊತ್ತು.
ಕಾಡುತ್ತವೆ ನೆನಪು

ನೂಲಿನಂತೆ ಸೀರೆ ಆಗಬೇಕೆಂದು
ಚೆಂದದ ಗಟ್ಟಿನೂಲಲ್ಲೇ ನೇಯ್ದರೂ ಈಗೀಗ
ಸೀರೆಗಿಲ್ಲ ಅದೇ ಆಕಾರ ಬಣ್ಣ ಧಾಡಸಿತನ
ಎತ್ತೆತ್ತಿ ಒಗೆದರೂ ಹರಿಯದ ಆ ಕಾಲದ
ಸೀರೆ ಇವಲ್ಲ ಕಸಿವಿಸಿಯಾಗುತ್ತಾಳೆ ಆಕೆ
ಬರಿ ಚೆಂದ ಅಲ್ಲ ಬದುಕು ಆತ್ಮಬಲ ಬೇಕು
ಸ್ಥೈರ್ಯಕ್ಕೆ ಇಂಬು ಆಕೆ
ಕಾಡುತ್ತವೆ ನೆನಪು

ಎಂದೋ ಎಡವಿಕೊಂಡ ಕಾಲು
ನೋವು ಮರುಕಳಿಸಿ ಘಾಸಿ ಮಾಡುತ್ತವೆ.
ತಣ್ನೀರನ್ನಾದರೂ ತಣಿಸಿ ಕುಡಿಯಲು ಹೇಳು
ಹೇಳುತ್ತಾನೆ ಆಕೆಗೆ
ಕೇಳಲೆಂದೆ – ಎತ್ತರಿಸಿದ ದನಿಯಲ್ಲಿ
ಬೇಡಿದ್ದನ್ನು ಕೊಡಿಸಬೇಡ
ತಾಕೀತು ಮಾಡುತ್ತಾನೆ ಆಗಾಗ
ಚಟವಾದೀತು, ಹಟವಾದೀತು ಬಯಕೆಗಳು
ಬೆಳೆದಂತೆ – ಎನ್ನುತ್ತಾನೆ
ರಾಗಕ್ಕೆ ತೆರನಾದ ತಾಳ ಆಕೆಯದು.
ಕಾಡುತ್ತವೆ ನೆನಪು

ಬಿರುಸಾದ ಗಾಳಿಗೂ ಕೂಡ ಗಿಡಗಳು
ಬಗ್ಗಿಲ್ಲ. ಸ್ವಲ್ಪ ಸೊಟ್ಟಗಾದರೂ ಅರೆಗಳಿಗೆ
ನೆಟ್ಟಗೆ ನಿಲ್ಲುತ್ತವೆ ಮರುಗಳಿಗೆ
ಬಯಲ ಗಿಡಗಳಿಗೆ ಗಾಳಿ ಎದುರಿಸಿ ಗೊತ್ತು.
ಬೆಳೆಯಬೇಕು, ಕಲಿಯಲಿ ಇವರೂ ಅವರಂತೆ
ಎನ್ನುತ್ತಾನೆ ಆತ
ಕಾಡುತ್ತವೆ ನೆನಪು

ತೊಗಲ ಹೊದಿಕೆಯ ಹೊದಿಸಿ
ರಕ್ತಕ್ಕೆ ಕೆಂಪು ಸುರಿದವರು ಅವರು
ಕಾಡುತ್ತವೆ ನೆನಪು
ಕಾಡುತ್ತಲೇ ಇರುತ್ತವೆ ನೆನಪು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೀತಿ ಸತ್ತ ಮನೆಯಲ್ಲಿ
Next post ತುಘ್ಲಕ

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

cheap jordans|wholesale air max|wholesale jordans|wholesale jewelry|wholesale jerseys