ಸ್ವಾತಂತ್ರ್ಯ- ಕನಸು ನನಸು

ಅವರು ಬಿಳಿ ಬಣ್ಣದ ಮಾಯಾ
ಮಂದರಿ ಹೊದ್ದು ಬಂದಿದ್ದರು
ತೆವಳುತ್ತ, ಸರ್ಪಸಂತತಿ
ಅನ್ನವಿಕ್ಕಿದ್ದಲ್ಲೇ ಕನ್ನವಿಕ್ಕುವುದು.
ಕಸಿದುಕೊಂಡರು-ಹಕ್ಕು, ಸ್ವಾತಂತ್ರ್ಯ
ದತ್ತು ಮಕ್ಕಳಿಗೆ ಹಕ್ಕಿಲ್ಲ, ಕರಾಕರಣೆ,
ಒಡೆದು ಆಳುವ ತಂತ್ರ ಕುತಂತ್ರ
ಶ್ರೇಷ್ಠ ನಾಗರಿಕತೆಯ ಬುಡದಲ್ಲಿತ್ತು
ಅಪರ ಅನಾಗರಿಕತೆ, ಮತ್ತೆ ಕೆಲವರ
ಕೈಯಲ್ಲಿತ್ತು ಧರ್ಮಗಾಥೆಯ ಹೊತ್ತಿಗೆ
ಬೆಣ್ಣೆಮಾತಿನ ಬುದ್ದಿವಂತರ ಮತ್ತೊಂದು
ಅವತಾರ – ಅವಾಂತರ ಮತಾಂತರ
ಕನಸಾಯಿತು ಸ್ವಾತಂತ್ರ್ಯ
ಹೆಣ್ಣು, ಹೊನ್ನು ಮಣ್ಣುಗಳ ಪರತಂತ್ರ
ಹುಟ್ಟದಿದ್ದರೆ ಹೇಗೆ? ಸೇಡು
ಮನೆ ಮನೆಯಂಗಳದಿ ಒಂದೇ ಕಲರವ
ಹಕ್ಕು-ಸ್ವಾತಂತ್ರ್ಯ, ಅಲ್ಲೊಬ್ಬ ಇಲ್ಲೊಬ್ಬರಲ್ಲ
ಅವರೊಳಗೆಲ್ಲಾ ಒಬ್ಬನೆ-ವೀರ
ಮುತ್ತಿದರು ಅಕ್ಷೋಹಿಣಿ, ಅಕ್ಷೋಹಿಣಿ
ಹಣಾಹಣಿಗೆ, ನೆತ್ತರುಕ್ಕಿಸಿದರು. ಗಲ್ಲು ಗೆದ್ದರು.
ಬೂಟು ಕಾಲಿಗೆ, ತುಪಾಕಿ ಪೀರಂಗಿಗೂ
ಗುಂಡುಗುಂಡಿಗೂ ಗುಂಡಿಗೆಯ ಒಡ್ಡಿದರು.
ಒಂದೇ ಮಂತ್ರಘೋಷ -ಆದ್ಯ ಕನಸು
ತರುಣ ಧಮನಿಗಳಲಿ ಉರಿವ ಶಿಖೆ
ಜಾತಿ ಮತ ಪಂಥಗಳ ನಡುವೆ ಒಂದೇ ಮರ್ಮ
ಸ್ವಾತಂತ್ರ್ಯ ನಮ್ಮ ಧರ್ಮ

ಹುತ್ತ ಬೆಳೆದಿತ್ತು ಬೃಹದಾಕಾರ
ಆದರೆ ಪಕ್ಕದಲ್ಲೊಬ್ಬ ಅರೆನಗ್ನ ಮಂತ್ರವಾದಿ
ನಿಂತಿದ್ದ ಪುಂಗಿ ಹಿಡಿದು, ಹೆಡೆ ಎತ್ತಿದ
ಸರ್ಪಗಳ ಹೆಡೆ ಮುರಿಗೆ ಕಟ್ಟಲು
ಮತ್ತೊಬ್ಬ ಬಿಲ್ಲುಗಾರ ಕೋನೆ ಕೋನೆಗೂ
ಕಣ್ಣು ಮುಚ್ಚಿ ಬಾಣ ಬಿಡತೊಡಗಿದ.
ಇರುವೆ ಕಟ್ಟಿದ ಗೂಡು
ತನ್ನದೆಂದು ಬೀಗುತ್ತಿದ್ದ ಸರ್ಪಗಳು
ಸದ್ದಿಲ್ಲದೇ ಸರಿದು ಹೋದವು
ಹುತ್ತಕ್ಕೆ ಬೆಂಕಿ ಬೀಳತೊಡಗಲು
ನನಸಾಯಿತು ಸ್ವಾತಂತ್ರ್ಯ
ಭಾರತೀಯರ ಎದೆಗೂಡ ಕಹಳೆಯಲ್ಲೀಗ
ಜೈಹಿಂದ ಒಂದೇ ಮಂತ್ರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮೃತ್ಯು
Next post ಹೃಷೀಕೇಶಕ್ಕೆ

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

cheap jordans|wholesale air max|wholesale jordans|wholesale jewelry|wholesale jerseys