ಕಾಳಿ

ನಿತ್ಯ ಜುಳುಜುಳು ಝೇಂಕಾರ
ಆಡೊಂಬಲ ನಿನಗೀ ನೆಲ ಓಂಕಾರ
ಕೃಷ್ಣವರ್ಣ ಜಲಕನ್ಯೆಯ ವೈಯಾರ
ಕಾಳಿ ನಿನಗಿದೋ ಅನ್ವರ್ಥ ಶೃಂಗಾರ
ಸವಾಲು ಸಾಸಿರ ಎದುರಿಸಿ ಕರುಣೆ
ಹೊನ್ನ ಬದುಕಿಗೆ ದಾನದ ಸ್ಫುರಣೆ
ನಮ್ಮಯ ಮನದಲಿ ನಿನ್ನದೇ ಸ್ಮರಣೆ
ಕಾಳಿ ಜಪವಿದೋ ಮರೆಸಿತು ಬವಣೆ.

ಹುಟ್ಟನು ಕಂಡಳು ಜೋಯಿಡಾ ರಾಜ್ಯದಿ
ಡಿಗ್ಗಿಯ ಬುಡದಲಿ ಢಮರುಗೈದಳು
ಮಿಲನ ಉಂಡಳು ಕಾರವಾರದ ಕಡಲರಾಜನ
ತೋಳಸೆರೆಯಲಿ ವೀಣೆಯಾದಳು.

ಪಾಂಡರಿ, ನಾಗಿ, ನಾಶಿ, ಕಾನೇರಿ
ನದಿಗಳ ಸಂಗಮ ಸಾಲೆ
ಕುಣಿದು, ಕುಣಿಸಿ, ಕೊಳಲಗೈದಳು
ಬೆಳಕಿನ ಪುಂಜವ ಬೆಳಗಿದ ಬಾಲೆ
ಸುಪಾ, ನಾಗಝರಿ, ಕೊಡಸಳ್ಳಿ ಆಣೆಕಟ್ಟಿಗೆ ಶಾಲೆ
ಒಡಲೊಳು ತುಂಬಿವೆ ಮುಕುಟ ಮಣಿಗಳು
ನೀನೆಂದೂ ಬತ್ತದ ಮಾಲೆ

ಮಲೆಯ ಬನ ಬೆರಗು ನಿನ್ನಯ ಹೆದ್ದಾರಿ
ಇಂಚೂ ಇಂಚಿಗೂ ಸಂಚಿನ ಚಲನೆ ನಿನ್ನಯ ಮಾದರಿ
ಖಗಗಾನ ಮೀಟಿ ಮತಿಯಲಿ ನಿನ್ನದೆ ಶ್ರೀಕಾರ
ಹೆಮ್ಮೆಯ ಹೆಣ್ಣಿಗೆ ನಮ್ಮನೆ ಕಣ್ಣಿಗೆ ಹಾಕಿರಿ ಜಯಕಾರ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅದೇ ಕೊನೆ
Next post ಸೀತಾಫಲ ಮಂಡಿ

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

cheap jordans|wholesale air max|wholesale jordans|wholesale jewelry|wholesale jerseys