ಗಾಯಗಳು

ನಿನ್ನೆಯ ದಿನ ಮೈಯೆಲ್ಲವನ್ನು
ಗೀರಿಕೊಂಡಿದ್ದವು ಗಾಯಗಳು
ನಿನ್ನೆಯ ದಿನ ಮನಸೆಲ್ಲವನ್ನೂ
ಹೀರಿಕೊಂಡಿದ್ದವು ಗಾಯಗಳು

ನಾನು ಅವುಗಳಿಗೆ ಪರಿಪರಿಯಾಗಿ
ತಿಳಿಯ ಹೇಳಿದೆ
ಪ್ರೀತಿಯ ಮಾತಿಂದ
ಸಂತೈಸಲು ನೋಡಿದೆ
ಅವು ನನ್ನನ್ನು ಧಿಕ್ಕರಿಸಿದವು

ಅಹಂಕಾರದ ಗಾಯಗಳವು
ಇನ್ನಷ್ಟು ಹೊತ್ತಿಕೊಂಡು ಉರಿದವು
ಅವಮಾನದ ಗಾಯಗಳವು
ಮತ್ತಷ್ಟು ಕೀವು ಸುರಿಸಿದವು

ಇವತ್ತು ನಿರ್ಧರಿಸಿದ್ದೇನೆ
ಆ ಸೂರ್ಯನನ್ನು ಕೇಳಿಯೇ ಬಿಡುತ್ತೇನೆ
ಅವನು ನನ್ನ ಗಾಯಗಳನ್ನು
ಒಣಗಿಸಬಹುದು

ನಾಳೆ ಚಂದ್ರನ ಮೊರೆ ಹೋಗುತ್ತೇನೆ
ಅವನು ಅಳಿದುಳಿದ
ಕಲೆಗಳನ್ನೂ ಅಳಿಸಿಹಾಕಬಹುದು

ರಾತ್ರಿಗಳು ಹಗಲುಗಳು
ಹಗಲುಗಳು ರಾತ್ರಿಗಳು
ಗಾಯಗಳು ಮಾಯಬಹುದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯದುಮಣಿಯ ಜನುಮದಿನ
Next post ವ್ಯಾಪಾರ

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

cheap jordans|wholesale air max|wholesale jordans|wholesale jewelry|wholesale jerseys