ಸತಿ ಹೋಗುವುದಿಲ್ಲ….

ನಿನ್ನ ಪ್ರೀತಿಯನ್ನಷ್ಟೇ ಉಟ್ಟು
ಹೊರಟು ನಿಂತಿದ್ದೇನೆ-
ಇಗೋ ಹೊರಟೆ-
ಎಲ್ಲವ ದಾಟಿ ಹೋಗಿಯೇ ಬಿಡುತ್ತೇನೆ

ನೀ ಬಿಟ್ಟು ಹೋದ
ತುಂಡು ನೆಲವನ್ನು
ಉತ್ತು ಬಿತ್ತಿ
ಫಸಲು ತೆಗೆಯುತ್ತೇನೆ

ಚಳಿ-ಗಾಳಿಯೊಡನೆ ಗುದ್ದಾಡಿ
ಕಲ್ಲುಗಳ ಜತೆಗೂಡಿ ಹಾಡಿ
ಮೈಮರೆಯುತ್ತೇನೆ

ಬಿಸಿಯಪ್ಪನನ್ನು, ತಂಪಣ್ಣನನ್ನು
ಒಬ್ಬರೆದುರಿಗೆ ಮತ್ತೊಬ್ಬರನ್ನು
ಹೂಡಿ ಆಟ ನೋಡುತ್ತೇನೆ

ದಿನಚರಿಯ ಪುಟಗಳಲಿ
ಮಳೆ ಹನಿ, ಮಿಂಚು-ಗುಡುಗಿನ
ಲೆಕ್ಕ ಬರೆದಿಡುತ್ತೇನೆ

ಇರುವುದೊಂದೆ ನದಿ
ಮೊಗೆದು ಮೊಗೆದು….
ಇರುವುದೊಂದೆ ಬಾನು
ಅಳೆದು ಅಳೆದು….
ಒಂದು ದಿನ ಸದ್ದಿಲ್ಲದೆ
ಸರಿದು ಹೋಗುತ್ತೇನೆ.

ಸತಿ ಹೋಗಬೇಡ….
ನನ್ನ ಸಖಿಯಾಗು ಬಾ ಗೆಳತಿ
ಅಂದ ಪ್ರೀತಿ ಶಿವನೊಡನೆ
ನನ್ನ ಮರುಮದುವೆ, ಮನೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡಿ
Next post ದಾಹ

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

cheap jordans|wholesale air max|wholesale jordans|wholesale jewelry|wholesale jerseys