೮೮, ಫೆಭ್ರವರಿ ೩

ಕಾನ್ಪುರದ ಎಲ್ಲ ಬೀದಿಗಳಲ್ಲಿ
ಎಲ್ಲ ಮೆನಗಳಲ್ಲಿ
ಮನೆಯ ಮಾಳಿಗೆಯಲ್ಲಿ ಮೂರು
ಹೆಣಗಳು ತೂಗಿದವು ನಿಶ್ಚಿಂತೆಯಲ್ಲಿ.

ಗುಲಾಬಿಯಷ್ಟೇ ಮೃದು ಮನಸಿನ
ಜೀವಿಗಳು ಸಾವಿನಲ್ಲೂ
ನೋವಿನ ಮುಖವನ್ನೇ ಹೊತ್ತಿದ್ದವು.
ಮದುವೆಯ ಮಾರುಕಟ್ಟೆಯಲ್ಲಿ
ಬಿಕರಿಯಾಗದ ಜೀವಗಳು
ಕುಲ, ಗೋತ್ರ, ದೇವರು, ಧರ್ಮ
ಬಂಧು ಬಳಗದ ಸಮ್ಮುಖದಲ್ಲೆ
ನೇಣಿಗೇರಿದ್ದವು.

ಜಗತ್ತಿನ ತಂದೆ ತಾಯಿಯರು
ಅಚ್ಚರಿಯಿಂದ, ಭಯದಿಂದ
ನೋಡಿದರು. ತಂತಮ್ಮ
ಮಕ್ಕಳ ಮುಖವೆ
ಕಂಡಂತಾಗಿ ಹೌಹಾರಿದರು.

ಕೆಲವು ಎದೆಗಳು ಭಾರವಾದವು
ಹಲವು ಕಣ್ಣುಗಳು ನೀರಾದವು
ಒಂದಷ್ಟು ತುಟಿಗಳು
ಲೊಚಗುಟ್ಟಿ ಸುಮ್ಮನಾದವು.

ಆದಿನ ಕಾನ್ಪುರದ
ಎಲ್ಲ ಬೀದಿಗಳಲ್ಲಿ
ಎಲ್ಲ ಮನೆಗಳಲ್ಲಿ
ಹೆಣಗಳದ್ದೆ ವಾಸನೆ
ಎಲ್ಲ ನಿರುಮ್ಮಳ
ಅದನ್ನೆ ಉಸಿರಾಡಿದರು.

(ಹೆತ್ತವರು ವರದಕ್ಷಿಣೆ ತೆರುವುದನ್ನು ತಪ್ಪಿಸಲು ನೇಣು ಹಾಕಿಕೊಂಡ ಕಾನ್ಪುರದ ಮಮತಾ, ಪೂನಂ, ಅಲಕಾ ಸಹೋದರಿಯರು ಬರೆಸಿದ ಕವನ)
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಿಡಿ
Next post ಏಕತೆ

ಸಣ್ಣ ಕತೆ

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

cheap jordans|wholesale air max|wholesale jordans|wholesale jewelry|wholesale jerseys