ನೀನೆಂಬುದಿಲ್ಲದಿದ್ದರೆ…. ನಾನೆಂಬುದೂ ಇಲ್ಲ

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಗಿಡ ಮರ ಹೂಗಳಿಲ್ಲ.
ಹಕ್ಕಿ ಹಾಡು, ಗೂಡುಗಳಿಲ್ಲ.
ಕತ್ತಲ ತೊಡೆಯುವ ಸೂರ್‍ಯ
ಕಲ್ಮಶಗಳನ್ನು ತೊಳೆಯುವ ನದಿ
ಜಗತ್ತೆ ಅತ್ತಂತೆ ಕಾಣಿಸಿಸುವ ಮಳೆ
ಜಗತ್ತೆ ನಕ್ಕಂತೆ ಕಾಣಿಸುವ
ಬೆಳದಿಂಗಳು, ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಮೆಟ್ಟಿದರೂ ಮಿಡುಕದ ನೆಲ
ಮಿಂಚಿ ಮಳೆಗರೆವ ಮುಗಿಲು
ತಗ್ಗದ, ಬಗ್ಗದ, ಜಗ್ಗದ
ಬೆಟ್ಟಗಳ ಸಾಲು
ಝೇಂಕರಿಸುವ ದುಂಬಿ
ನಿಟ್ಟುಸಿರಿಡುವ ಗಾಳಿ
ಹರ್‍ಷ ತುಂಬಿದ ಹಗಲು
ವಿಷಾದ ಸೂಸುವ ಇರುಳು
ಯಾವುವೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಪಂಜಗಳಿದ್ದೂ ಪಂಜರದೊಳಗೆ
ಬಂದಿಯಾದ ಸಿಂಹ
ನರ್‍ತನವೆಂದರೇನು ಎಂದು
ಕೇಳುವ ನವಿಲು
ಕಾಡಿನ ಜಾಡರಿಯದ ಜಿಂಕೆ
ಹಾರಲು ಹಿಂಜರಿಯುವ ಹಕ್ಕಿ
ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಚಿಂದಿ ಆಯುವ ಹುಡುಗ
ಹೂಮಾರುವ ಹುಡುಗಿ
ಕಳ್ಳ, ಕದೀಮ, ಕಲಾವಿದ,
ಠೇಂಕರಿಸುವ ರಾಜಕಾರಣಿ
ಹೂಂಕರಿಸುವ ಉಗ್ರಗಾಮಿ
ಯಾರ್‍ಯಾರೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ನೇಣಿಗೇರಿದ ನಿರುದ್ಯೋಗಿ
ಪ್ರೀತಿಸಿ ಕೈಕೊಟ್ಟ ಪ್ರೇಮಿ
ಹೆತ್ತು ಬಿಸಾಡಿಹೋದ ತಾಯಿ
ವರದಕ್ಷಿಣೆ, ಸೀಮೆಎಣ್ಣೆ,
ಕೋರ್‍ಟು, ಕಛೇರಿ,
ಜಾಮೀನೂ ಜೈಲು
ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ನೀರಿಲ್ಲದ ನಲ್ಲಿ
ಕೈಕೊಡುವ ಕರೆಂಟು
ವೋಟು, ಬಜೆಟು,
ಸ್ಲಮ್ಮು, ಸ್ಲೋಗನ್ನು
ಸಾರಾಯಿ, ತುರಾಯಿ
ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಮಸೀದಿ, ಮಠ, ಮುಷ್ಕರ
ಮೆರವಣಿಗೆಗಳಿಲ್ಲ.
ಭಾಷಣ, ಭರವಸೆ
ಪ್ರಣಾಳಿಕೆಗಳಿಲ್ಲ.
ಗಡಿ, ಗನ್ನು,
ಅಪಘಾತ, ಅಣುಬಾಂಬು
ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ದುಃಖ, ದುಗುಡ, ದುಮ್ಮಾನವಿಲ್ಲ.
ಆಸೆ, ಅಕ್ಕರೆ, ಅಹಂಕಾರಗಳಿಲ್ಲ.
ಆತ್ಮನೂ ಇಲ್ಲ, ಪರಮಾತ್ಮನೂ ಇಲ್ಲ.
ಧ್ಯಾನ, ಮೋಕ್ಷ, ಮರಣ,
ಸಮಾಧಿ, ಸ್ಮಾರಕಗಳಿಲ್ಲ.
ಅಣುವೂ ಇಲ್ಲ
ಬ್ರಹ್ಮಾಂಡವೂ ಇಲ್ಲ.

ಇಲ್ಲಿ….
ನಾನು-ನೀನು
ಏನೇನೂ ಅಲ್ಲ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಬರಿ – ೩
Next post ದಾಹ

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

cheap jordans|wholesale air max|wholesale jordans|wholesale jewelry|wholesale jerseys