ಸೇತುವೆ ಕುಸಿದಿದೆ

ನಾನು ಕಳಿಸಿದ್ದು ಮಿಂಚುಗಳನ್ನು
ತಲುಪಿದ್ದು ಮಿಣುಕು ಹುಳುಗಳೇ?
ಹಾಗಾದರೆ ಮಿಂಚೆಲ್ಲ ಹೋಯಿತು?

ನನ್ನ ಕುಂಚದಿಂದ ಮೂಡಿದ ಮೊಲ
ನಿನ್ನಲ್ಲಿಗೆ ಕೊಂಬಿನೊಂದಿಗೆ ಓಡಿಬಂದಿತ್ತೆ?
ಹಾಗಾದರೆ ಮೊಲವೆಲ್ಲಿ ಮಾಯವಾಯಿತು?

ನಾನು ಕಿವಿಯಲ್ಲಿ ಕಿಣಿಕಿಣಿಸಿದ್ದು
ಮೌನದ ಗಂಟೆಯನ್ನು
ಕತ್ತರಿಸಿದ್ದು ಸಿಡಿಲೆ?
ಹಾಗಾದರೆ ಸಿಡಿಲಾದರೂ ಎಲ್ಲಿಂದ ಬಂತು?

ನಾನು ಮುಟ್ಟಿಸ ಬಯಸಿದ್ದು ಬೆಂಕಿ ಬಿಸಿಯನ್ನು
ಬೆಚ್ಚಗಿತ್ತೆ? ಬಿಸಿ ನೀರಿನ ಹಾಗೆಯೇ?
ಹಾಗಾದರೆ ಬೆಂಕಿಗೇನಾಯಿತು?

ಕಗ್ಗಂಟಿನ ಹಾದಿ ಕಾಡಿನಂತಿದೆ.
ತಣ್ಣಗೆ ಕೂತು ಧ್ಯಾನಿಸಿದಂತೆ
ಮಬ್ಬು ಸರಿಯುತ್ತಿದೆ….

ಪೊರೆ ಕಳಚಿದ ಕಣ್ಣಲ್ಲಿ
ಚಿತ್ರ ಮೂಡುತ್ತಿದೆ
ಏನೂ ಅಲ್ಲ-
ಸೇತುವೆ ಕುಸಿದಿದೆ.

ನನ್ನ ಪುಟ್ಟ ಪುಟ್ಟ ಹೆಜ್ಜೆಯೊಂದಿಗೆ
ನನ್ನೆತ್ತರಕ್ಕೂ ಬೆಳೆದ ಸೇತುವೆ
‘ನಾನು’ ಇರುವಂತೆಯೆ ಕುಸಿದಿದೆ.

ನಿನ್ನೆ ಮುಸ್ಸಂಜೆಯನ್ನು ಬೆಚ್ಚಗೆ
ತರುಣನ ಹಾಗೆ ಕಳೆದ ಸೇತುವೆ
ಇದೀಗ ಸಾವಿನ ಸುಖ ನಿದ್ದೆಯಲ್ಲಿದೆ.

ನಾನೇ ನೆಟ್ಟು ನೀರುಣಿಸಿ
ಬೆಳೆಸಿದ ಗಿಡದ ಹೂವ
ಪರಾಗ, ಕೇಸರದ ಸಮೇತ
ಒಂದು ಹನಿ ಮಕರಂದ
ಅಲ್ಲಾಡದ ಹಾಗೆ ಅಷ್ಟೂ ದಳಗಳೊಂದಿಗೆ
ಖುದ್ದಾಗಿ ಒಯ್ಯುವೆನೆಂದು
ಕೊಟ್ಟ ಮಾತು ಇನ್ನೂ
ಹಾಗೆಯೇ ಇರುವಂತೆ
ಸೇತುವೆ ಕುಸಿದಿದೆ.

ಮಿಂಚುಗಳನ್ನು ಮಿಣುಕು
ಹುಳುಗಳನ್ನಾಗಿಸಿ
ಮೊಲಕ್ಕೆ ಕೊಂಬು ಮೂಡಿಸಿ
ಬೆಂಕಿಯನ್ನು ಬಿಸಿನೀರನ್ನಾಗಿಸಿ
ಇಕ್ಕಟ್ಟಿಗೆ ಸಿಲುಕಿಸುತ್ತಲೇ
ಬಿಕ್ಕಟ್ಟಿನಿಂದ ಬಿಡುಗಡೆಗೊಳಿಸಿದ
ಸೇತುವೆ ಕುಸಿದಿದೆ.

ಕುಸಿದ ಸೇತುವೆಯಾಚೆ
ಎಂದಿನಂತೆ ಹೂವು ಅರಳಿದೆ.
ಕುಸಿದ ಸೇತುವೆಯ ಮೇಲೆ ಕೂತು
ಕೋಗಿಲೆ ತನ್ನ ಪಾಡಿಗೆ ತಾನು ಹಾಡಿದೆ.

ನದಿಯಲ್ಲಿ ನೀರು ಹರಿದಿದೆ
ಸಂತನಂತೆ ಸಹಜವಾಗಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಬರಿ – ೯
Next post ಮಣ್ಣು

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

cheap jordans|wholesale air max|wholesale jordans|wholesale jewelry|wholesale jerseys