ಎಲ್ಲಿದೆ ದಂಡೆ, ಯಾರನ್ನು ಕಂಡೆ?

ಕಡಲ ಕರುಳು ಬಳ್ಳಿಯಲ್ಲರಳಿದ ಹೂ-ಮಗನೆ
ಎಲೆ ಎಲೆ ಅಲೆಯೊಳಗಣ ನಿತ್ಯ ಹರಿದ್ವರ್‍ಣನೆ
ಅಂಬಿಗನೆ-
ಹೇಳು ಆ ದಂಡೆಯಲ್ಲೇನಿದೆ?

ಹುಟ್ಟಿನ ಹರಿಕಾರನೆ
ಮತ್ಸ್ಯಕನ್ನಿಕೆಯ ಪ್ರಿಯಕರನೆ
ಅಂಬಿಗನೆ-
ಹೇಳು ಆ ದಂಡೆಯಲ್ಲೇನಿದೆ?

ಸುಳಿಗಾಳಿಯ ಸನ್ಮಿತ್ರನೆ
ಮಳಲ ಮಾನಸ ಪುತ್ರನೆ
ಅಂಬಿಗನೆ ಆ ದಂಡೆಯಲ್ಲೇನಿದೆ?


ನಾನು ಅಂಬಿಗನು
ನಂಬುವೆಯಾ?
ಹಾಗಾದರೆ ಕೇಳು-

ಆ ದಂಡೆಯಲ್ಲೂ….
ಈ ದಂಡೆಯಲ್ಲೇನಿದೆ ಎಂದು
ಕೇಳುತಿಹನು, ನಿನ್ನಂತೆಯೆ ಅವನು
ಸಂಶಯತ್ಮನು- ಅದು ನೀನು!

ಆ ದಂಡೆಯಲ್ಲೂ….
ಹೀಗೆಯೆ ಆಲಿಸಿ ನಗುತಿಹನು
ನನ್ನಂತೆಯೆ ಅವನು ಅಂಬಿಗನು
ಅದು ನಾನು

ಈಗ ಹೇಳು-
ಎಲ್ಲಿದೆ ದಂಡೆ? ಯಾರನ್ನು ಕಂಡೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅವರು ಮತ್ತು ನಾವು
Next post ಬದುಕು

ಸಣ್ಣ ಕತೆ

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಜಡ

    ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

cheap jordans|wholesale air max|wholesale jordans|wholesale jewelry|wholesale jerseys