ಬಾಗಿಲ ತೆರೆದು

ಬಾಗಿಲ ತೆರೆದು
ಹೊಂಬೆಳಕನ್ನು ಚೆಲ್ಲುತಲಿ
ಪಿಸು ಮಾತಲ್ಲಿ ಕಿವಿಗೊಟ್ಟು ಕೇಳುತಲಿ ||

ತಳಿರು ತೋರಣ ನಗೆಯ ಬೀರುತಲಿ
ಇಗೋ ಬಂತು ಯುಗಾದಿ
ನವ ಚೈತನ್ಯ ತುಂಬಿ ಬಾಳಿಗ ||

ಬೇವಾಗಿರಲು ಭಾವನೆಯು
ಬೆಲ್ಲವಾಗಿರಲು ಸ್ನೇಹವು
ಬೇವು ಬೆಲ್ಲ ಸವಿದರೆಲ್ಲ
ಬೆರೆತ ಭಾವ ಚೈತನ್ಯವು ||

ಹೊಸ ದಿಗಂತ ಮೂಡಲಿ
ಋತುವು ಹೊಸತಾಗಲಿ
ಬೊಗಸೆ ತುಂಬಿದ ಹೊಸ ಚೇತನಕೆ
ಹೊಸ ರಾಗದ ಹೊಸತಿಗೆ ||

ಹಸಿದ ಹೊಟ್ಟೆಯ ಕೂಗಿಗೆ
ಹೊಸತಾದ ಕಣ್ ನೋಟಕೆ
ಹೊಸತಾಗಿ ಬರಲಿ ಯುಗಾದಿ
ಗುಡಿಸಲಂಗದ ರೂಪಕ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೋಕಾಕ್ ವರದಿ – ೨
Next post ಹಣೆಬರಹ

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

cheap jordans|wholesale air max|wholesale jordans|wholesale jewelry|wholesale jerseys