ಮರದಡಿಯಲಿ

ಇಬ್ಬನಿ ಹನಿ ಹನಿ ಸುರಿದು
ಹಾಸಿದ ತಂಪಿನ ಹೊತ್ತು
ನಿನ್ನ ಕಣ್ಗಳು ನನ್ನ ದಿಟ್ಟಿಸುತ್ತಿದ್ದವು
ಎಲ್ಲಾ ನೀರಸಗಳ ಸರಿಸಿ ಸೂರ್ಯ
ನಮ್ಮಿಬ್ಬರನು ತಬ್ಬಲು ಏರಿಬಂದ
ಹಕ್ಕಿ ಹಾರಿಹೋದ ತೇಲು ಬೆಳಗು
ಎದೆಯ ನದಿಯಲಿ ರಂಜಕದಲೆಗಳು.

ಪುಟ್ಟ ಇರುವೆ ಗೂಡ ಸರಿಸಿ
ಚಲಿಸಿದ ಚಲನೆ ಅಂಗಾಲು ತುಂಬ
ಕಚಗುಳಿ ಕಂದು ಬಣ್ಣದ ಎಲೆಯ
ತುಂಬ ವಿಷಾಧದ ಮೌನ ಕನಸುಗಳ
ದಿಗಂತ ಒಮ್ಮೆ ನೀಲಿಯಾಗಿ ಬಿಳಿಯಾಗಿ
ಮರದ ಎಲೆ ತುಂಬಾ ಕರಿನೆರಳ ಹಾಡು.

ಮೌನ ಕಳೆದು ಮಾತುಗಳ ಲಂಗರು
ಅಪ್ಪಳಿಸಿದ ಅಲೆಗಳ ಒಲವು
ದಟ್ಟ ಹೊಲದಲಿ ಅರಳಿದ ಸೂರ್ಯಕಾಂತಿ
ಮಂಜು ಮುಸುಕಿದ ಬಯಲು ಆಲಯ
ಮಾಗಿದ ಪ್ರೇಮ ನಿವೇದನೆ
ಮರದಡಿ ಗಡಿಯಾರದ ಚಲನೆ.

ನಾವು ಹಾಡಲಾಗದ ಹಾಡು ಕತ್ತಲೆ
ಬರೆಯಲಾರದ ಕವಿತೆಗಳು ಮಬ್ಬು
ಎಲ್ಲವೂ ಆಗಿ ಆಗದೇ ಅರಳಿ ನಿಂತ
ಮೌನ ಮರ ನೆರಳು ಬಿಂಬದಲಿ
ಮೂಡಿದ ಪ್ರತಿಬಿಂಬ ಲಂಬಕೆ
ಸಾಕ್ಷೀ ಅಂತರಂಗದ ಚಿಗುರು ಹಸಿರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೀರ್ಘಾಯುಷ್ಯದ ಗುಟ್ಟು
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೫೨

ಸಣ್ಣ ಕತೆ

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

cheap jordans|wholesale air max|wholesale jordans|wholesale jewelry|wholesale jerseys