ಕಳಚಿಕೊಂಡವರು

ನಿನ್ನ ಧ್ವನಿ ಕೇಳಿದಾಗ ಆಲಿಸಿದಾಗ
ಕೈಯಲ್ಲಿ ಜಾರಿಹೋದವು ಸ್ಪರ್ಶಕೆ
ಸಿಗದ ಶಬ್ದಗಳು ಒಮ್ಮೆಲೇ ಬಂದು
ಎರಗಿದ ನೆನಪುಗಳು ಯಾವುದೋ
ಪರಿಮಳ ಎದೆಯಲ್ಲಿ ಮುಳ್ಳಿನ ಕೇದಿಗೆಬನ
ಕನಸಿನ ದಾರಿ ಗುಂಟ ದಡ ವಿಲ್ಲದ ನೆರಳು
ಬೀದಿಯಲ್ಲಿ ಬೇಸಿಗೆ ಬಿಸಿಲ ಮರೀಚಿಕೆ.

ನಿಂತಲ್ಲಿ ಕುಂತಲ್ಲಿ ಕನ್ನಡಿಯಾಗದ
ನಿನ್ನ ಬಿಂಬ ಪ್ರತಿಫಲಿಸಲಾರದೇ ಮಂಕು
ಆವರಿಸಿದ ಆಲದ ಮರದ ಬಿಳಲುಗಳು
ಅಡಿಯಲ್ಲಿ ದಾಖಲಾಗಲಿಲ್ಲ ಪ್ರೀತಿ
ಮಾತುಗಳಾಡದ ಸಂಜೆ ಮೌನದಲಿ
ರೂಪವಿಲ್ಲದ ಚಿತ್ರಗಳು ಮಾಸಿ ಹೋದವು
ಚಳಿಗೆ ಉದುರಿ ಬಿದ್ದ ಕಂದು ಎಲೆಗಳು.

ಜೀವದಲೆಗಳು ಬಿತ್ತಿದ ಅಂತರ್ಜಲದ
ಭಾವಿ ಒಬ್ಬೊಬ್ಬರಾಗಿ ಇಳಿದು ಕದಡಿ
ಕೆಸರ ತಳ ಮರೆತುಬಿಟ್ಟ ಪಾಠ
ಅರಿವಿಲ್ಲದ ವ್ಯಾಪ್ತಿಯ ಗೆರೆಗಳು
ಲೋಕದ ಟೊಂಕು ತಿದ್ದುವ ಹಂಗು
ಮನವ ಸಂತೈಸಿಕೊಳ್ಳಿದ ಪರಿಗಳು
ಮಳೆ ಹನಿಗೆ ಹಸಿಯಾಗದ ಮನ.
ಕಳಚಿಕೊಂಡು ಮರವಾಗುವ ಸಂತ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹದಿಹರೆಯದವರ ಶಕ್ತಿ ಸಾಮರ್ಥ್ಯಗಳ ಶತ್ರು : ಖಿನ್ನತೆ
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೫೪

ಸಣ್ಣ ಕತೆ

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

cheap jordans|wholesale air max|wholesale jordans|wholesale jewelry|wholesale jerseys