ಮಾತು ಸುಣ್ಣಾ ಮೌನ ಮಲ್ಲಿಗೆ

ಒಡಕು ಮಸರಿನ ಸಿಡಿದ ಎಸರಿನ
ಶಬ್ಬ ಡಂಗುರ ನಿಲ್ಲಲಿ||

ಉಲಿಯ ನುಲಿಯಲಿ ಬಲಿಯ ನೂಲದೆ
ಶಬ್ದ ಗಂಟೆಯ ಮೀರುವೆ
ತಮಟೆ ಜಾಗಟೆ ಕಾಳಿಭೇರಿಯ
ಶಂಖವಾದ್ಯವ ದಾಟುವೆ

ಮಾತು ಸುಣ್ಣಾ ಮೌನ ಮಲ್ಲಿಗೆ
ಹೂವಿನೆದೆಯಲಿ ಮಲಗುವೆ
ಜಾತ್ರಿ ಬೇಡ ತೇರು ಬೇಡ
ಕಳಸ ಗೋಪುರ ತೊರುವೆ

ಜಡದ ಮಜ್ಜಿಗೆ ಕಡೆದು ತೆಗೆಯುವೆ
ಶಿವನ ಶಾಂತಿಯ ಬೆಣ್ಣೆಯ
ಕಡಲ ಕೋಲಾಹಲದ ಸಂತೆಗೆ
ತರುವೆ ಶಾಂತಿಯ ಮೆಂತೆಯ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಸ್ತುನಿಷ್ಠ ವಿಮರ್ಶೆ
Next post ನಿನಗೆ ಒಂದು ಮಾತು ಹೇಳಬೇಕು

ಸಣ್ಣ ಕತೆ

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

cheap jordans|wholesale air max|wholesale jordans|wholesale jewelry|wholesale jerseys