ಶಿವನ ಸುಂದರ ತೇರು

ಓ ವಿಶ್ವ ಮಾನವತೆ ಓ ಸತ್ಯ ಶಾಶ್ವತತೆ
ಓ ಪ್ರೇಮ ಕಾಶ್ಮೀರ ಸುರಿದು ಬರಲಿ
ಮುಗಿಲು ಮಲ್ಲಿಗೆ ಅರಳಿ ನೆಲತಾಯಿ ಚುಂಬಿಸಲಿ
ಗುಡುಗು ಎಲುಬಿನ ಗಡಿಗಿ ಒಡೆದು ಬರಲಿ

ನಾವು ಆತ್ಮರ ಬಳಗ ನಾವು ದೇವರ ಬಳಗ
ಈ ಬದುಕು ಅಮೃತದ ಪ್ರೇಮ ಕೊಳಗ
ಜಾತಿ ಬೇಲಿಯ ಕೋತಿ ಅಲ್ಲಲ್ಲ ನಾವಲ್ಲ
ಕಟ್ಟೋಣ ಸಾಗರಕೆ ದೇವಹಡಗ

ಮುಳ್ಳು ಮಲ್ಲಿಗೆಯಾಗಿ ಕಲ್ಲು ಬೆಣ್ಣೆಯು ಆಗಿ
ಹಾವು ಚೇಳಿನ ರಾತ್ರಿ ಬೆಳಗಾಗಲಿ
ವರ್ಗಭೇದದ ಭೂತ ವರ್ಣಯುದ್ಧದ ಪ್ರೇತ
ಬಿಟ್ಟೋಡಿ ಪಂಚಮಿಯ ಸವಿಯಾಗಲಿ

ಬಾಯ್ತುಂಬ ಸವಿಮಾತು ಎದಿತುಂಬ ಶಿವಮಂತ್ರ
ಮನತುಂಬ ಶಿವಲಿಂಗ ಗುಡಿಗಟ್ಟಲಿ
ಸತ್ಯ ಜ್ಞಾನದ ತೇರು ಸ್ವರ್ಣ ವರ್ಣದ ತೇರು
ಶಿವನ ಸುಂದರ ತೇರು ಗಡಿಮುಟ್ಟಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕರ್‍ಮ
Next post ದೇವತೆಗಳನ್ನು ಕುರಿತು ಒಂದು ಹೋಂವರ್‍ಕ್ ಪದ್ಯ

ಸಣ್ಣ ಕತೆ

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

cheap jordans|wholesale air max|wholesale jordans|wholesale jewelry|wholesale jerseys