ಎಲ್ಲೀ ಕಾಣೆ ಎಲ್ಲೀ ಕಾಣೆ

ಎಲ್ಲೀ ಕಾಣೆ ಎಲ್ಲೀ ಕಾಣೆ
ಎಲ್ಲಮ್ಮನಂಥಾಕಿನ ಎಲ್ಲೀ ಕಾಣೆ        ||ಪ||

ಎಲ್ಲೀ ಕಾಣೆನು ಶಿವನೊಲ್ಲಭಿ ಎನಿಸಿದಿ
ಕಲ್ಲಿನೊಳಗೆ ಪುಟ್ಟಿ ಉಗುರುಗೊಳ್ಳಕೆ ಇಳದಿ    ||ಅ.ಪ.||

ಬಾಳಮಂದಿ ಬತ್ತಲ ಮಾಡಿದಿ ನೀ ಎಂಥಾಕೆವ್ವಾ
ಬೇವನುಡಿಸಿ ಮೋಜ ನೋಡಿದಿ
ತಾಳ ಜಾಗುಟೆ ಗೆಜ್ಜೆ ನುಡಿಸಿ
ಕಾಲೊಳು ಕಂಚಿನ ಕೊಳಾ ಹಾಕಿ ಕುಣಿಸ್ಯಾಡಿದಿ
ಮ್ಯಾಳಗೊಂಡು ಭಿಕ್ಷೆ ಬೇಡಿಸಿದಿ
ಜೋಲಿಗೆ ಹಾಕಿ ಜೋಗವ್ವೆಂದು ಜನಕ ಕಾಡಿದಿ
ಕಳ್ಳ ಸುಳ್ಳರಿಗೊಲಿದಿ ಕಾಲ ಕರ್ಮವ ಗೆಲಿದಿ
ಭಲೆರೆ ಭಲೆರೆ ಏಳುಕೊಳ್ಳನಾಳುವ ಶರಣೆ        ||೧||

ಬಲ್ಲಿದವರನೆಲ್ಲ ಹಿಡಿದು ಬೆನ್ನಿಲೆ ಸೀಲಿ
ಬಾಯಿಗೆ ಬೀಗ ಜಡಿದು
ಸಲ್ಲು ಸಲ್ಲಿಗೊಮ್ಮೆ ನುಡಿದು
ಉಧೋ ಎಂಬುದೊಳ್ಳೆದವ್ವ ನಿನ್ನ ಬಿರುದು
ಚಲ್ವ ಹೆಂಗಸರ ಶೀರಿ ಸೆಳೆದು
ಚಲ್ಲಣ ತೊಡಿಸಿ ಬುಲ್ಲಿ ತುಂಬಾ ಅರ್ಲ ಜಡಿದು
ಕೋಲುದೀವಟಿಗಿ ಬತ್ತಿ ಮೇಲೆ ಜಗವ ಹೊತ್ತಿ
ಭೂಲೋಕದೊಳು ನಿನ್ನ ಜಾಲಕಿನ್ನೆಣೆಯುಂಟೆ?    ||೨||

ಮಂಡಲದೊಳು ಮಾಯಕಾರ್ತಿ ಜಮದಗ್ನಿಮುನಿಯ
ಚಂಡಕೊರಸಿದ ಮಾಯಕಾರ್ತಿ
ದಂಡು ತಂದು ಗಿರಿಗೆ ಮುತ್ತಿದಿ ಮುನಿಗಳ ಗವಿಗೆ
ಗುಂಡ ಬಡಿದು ಗುಮರಿ ಹಾಕಿದಿ
ಮಿಂಡೇರಂತೆ ನೀರ ತರತಿ ಮಳಲಿನ ಕೊಡಕೆ
ದುಂಡ ಹಾವಿನ ಸಿಂಬಿ ಸುತ್ತಿದಿ
ಗಂಡ-ಹೆಂಡಿರ ಬಿಡಿಸಿ ಭಂಡಾರ ಚೀಲವ ಹೊರಿಸಿ
ರಂಡೀಹುಣ್ಣಿವೆಗಳಿದು ರಾಜಮುತ್ತೈದಿಯಾದೆವ್ವ    ||೩||

ಚಿಕ್ಕ ಮಲಕಿನ ದುರದುಂಡಿ ನೀ ಎಂಥಾಕೆವ್ವಾ
ಚಿಕ್ಕ ಮಗನೊಳು ಕಲಹಗೊಂಡಿ
ಎಕ್ಕಯ್ಯನ ಪ್ರಾಣಗೊಂಡಿ
ಕಕ್ಕಯ್ಯ ಶರಣರಿಗೊಪ್ಪುವಂಥ ರಾಜಮಿಂಡಿ
ಸೊಕ್ಕಿದ ಜನರ ಮನಸ ಕಂಡಿ
ಕಾರಿಕ ಕಾಯಿಕ್ಕಿ ಕರ್ಪುರ ಕಾಣಿಕಗೊಂಡಿ
ದಿಕ್ಕಿನೋಳ್ ಶಿಶುನಾಳ ಮುಕ್ಕಣ್ನನೊಳುಕೂಡಿ
ಅಕ್ಕರದಲಿ ಗುರುನಾಥ ಗೋವಿಂದಗೊಲಿದಿ        ||೪||

*    *    *    *

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಲ್ಲಮ್ಮನ ಜಾತ್ರೆಗೆ ಬಲ್ಲವರು ಹೋಗಿ
Next post ಸರಿಗಾಣೆನು ಧರಣಿಯೊಳಗಮ್ಮ

ಸಣ್ಣ ಕತೆ

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

cheap jordans|wholesale air max|wholesale jordans|wholesale jewelry|wholesale jerseys