ಕಟಗ ರೊಟ್ಟಿಗೆ ಗುಟುಗು ನೀರಿಗೆ

ಕಟಗ ರೊಟ್ಟಿಗೆ ಗುಟುಗು ನೀರಿಗೆ
ಕೋತಿ ಕಾಳಗ ನಡೆದಿದೆ
ಹುಳಿತ ಹಿಂಡಿಗೆ ಕೊಳೆತ ಸಾರಿಗೆ
ಹಾವು ಮುಂಗಲಿಯಾಗಿದೆ

ಜಾರಿಬಿದ್ದಾ ಆತ್ಮ ರತುನಾ
ಜಂಗು ರಾಡಿಯ ಅಡರಿತೊ
ದೀಪವಾರಿತೊ ದೀಪ್ತಿ ತೀರಿತೊ
ಬೆಳಗು ಇದ್ದಲಿಯಾಯಿತೊ

ರಕ್ತ ರಾಗಾ ರುಂಡ ಮುಂಡಾ
ಮದ್ದು ಗುಂಡಿನ ಭೋಜನಾ
ಕೊಂದು ಬಾಳುವ ಕೊಂದು ಉಳಿಯುವ
ಆತ್ಮ ಘಾತದ ಯಾತನಾ

ಶಾಂತಿ ತಾಯಿ ಯೋಗ ಮಾಯಿ
ನೋಡು ಮಕ್ಕಳ ಅಟಮಟಾ
ಮುಗ್ಧ ತಲೆಗಳ ಕಿತ್ತು ತಿಂಬುವ
ಮಸಣ ಪಶುಗಳ ವಟವಟಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಧ್ಯಚಿತ್ತ
Next post ನಮಗೆ ಗೊತ್ತು

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

cheap jordans|wholesale air max|wholesale jordans|wholesale jewelry|wholesale jerseys