ಬಿಸಿಲ ಕಾಲವು ಬಂದಿತೆ ?

ಎಲೆಯ ಮೇಲೆ ಎಲೆಯು ಉರುಳಿವೆ
ಬಿಸಿಲ ಕಾಲವು ಬಂದಿತೆ

ಹಕ್ಕಿ ಗೂಡು ಒಣಗಿ ಹೋಗಿದೆ
ಮುಗಿಲು ಕೆಂಡವ ಕಾರಿತೆ

ಎಲ್ಲಿ ಹೋಯಿತು ಹಸಿರು ಹೂಬನ
ಎಲ್ಲಿ ಅಡಗಿತು ಕೂಜನ

ಎಲ್ಲಿ ಮುಳುಗಿತು ಮಳೆಯ ಠಂಠಣ
ತಂಪು ಹನಿಗಳ ಸಿಂಚನ

ನೆಲಕೆ ಹೊಲಕೆ ಜಲಕೆ ಸುರಿದಿವೆ
ಬರಿಯ ಬಣಬಣ ಎಲೆಗಳು

ಬೆಂಕಿ ಬಿದ್ದರೆ ಬಗ್ಗನುರಿವವು
ಬಯಲು ಬಾನಿನ ನೆಲೆಗಳು

ಬಣ್ಣ ಬಣ್ಣದ ದಿಡುಗು ಗುಡುಗಿಗೆ
ಕಡೆಗೆ ಬಂದಿತೆ ಈ ಗತಿ

ಯೌವನೋತ್ಸವ ಹರ್ಷಹಾಡಿಗೆ
ಕಡೆಗೆ ತಿರುಗಿತೆ ಈ ಮತಿ
ಮತ್ತೆ ನಗುವಳೆ ವಸುಮತಿಽಽಽಽ
ಮತ್ತೆ ತರುವಳೆ ರಸಗತಿಽಽಽಽ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೀಪಿಕಾ ಸೃಷ್ಟಿ
Next post ಕಾವ್ಯ

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

cheap jordans|wholesale air max|wholesale jordans|wholesale jewelry|wholesale jerseys