ಮೂನ್ ಮೂನ್ ಸೇನಳಿಗೆ

ನಿನ್ನ ಅನರ್ಘ್ಯ ಸೊಬಗು ಸಿಡಿಮದ್ದಿನಂತೆ
ಹೊಡೆಯುವುದರಿಂದ ಬಹುಪಾಲು
ಜನರ ಎದೆ ತಲ್ಲಿಣಿಸುವುದಂತೆ
ತತ್ತರಿಸುವುದಂತೆ ಕೈಕಾಲು

ಕವಿಗಳಿಗೆ ಕೂಡ ಬರದು ಕವಿತೆಯ ಸಾಲು
ಹೀಗಿರುತ್ತ ಕೇವಲ ನಿನ್ನ ಛಾಯಾಚಿತ್ರ
ನೋಡಿಯೋ ಪರವಶನಾಗಿ ಸಂಪೂರ್‍ಣ
ಮೈಮರೆವ ಮೊದಲೆ ಬರೆಯುವೆನೀ ಪತ್ರ,

ಎಷ್ಟೋ ವರ್ಷಗಳಿಗೊಬ್ಬಳು ಕ್ಲಿಯೋಪಾತ್ರ
ಸೃಷ್ಟಿ ಅಪರೂಪಕ್ಕೆ ನಡೆಸುವ ಸಂಚು
ಅನಿಸುವುದು ನನಗೆ ಕೆಲವೊಮ್ಮೆ ಸೌಂದರ್ಯವೆಂದರೆ
ನಮ್ಮ ನಿರಾಶೆಗಳು ತಲಪುವ ತೀವ್ರತೆಯ ಅಂಚು

ದಟ್ಟ ಮೋಡಗಳಲ್ಲಿ ಘಟಿಸುವ ಮಿಂಚು
ಕಾದು ಸೋತು ಇನ್ನಿಲ್ಲವೆಂದಾಗ ಬರುವ ಮಳೆ
ಬೆಂದ ನೆಲದ ಪರಿಮಳವನ್ನು ಇತಿಹಾಸದ
ನೆನಪುಗಳನ್ನು ಒಯ್ಯುವ ಹೊಳೆ

ನಿನ್ನಿರವಿಗಿದೇ ಗುಟ್ಟು ಇದೇ ಸೆಳೆ
ಕೆಲವರಿಗೆ ಮೂರ್ಛೆಯನ್ನು ತರಬಹುದು
ಅದೂ ಪಡೆಯುವ ಒಂದು ವಿಧಾನ
ಎಷ್ಟೋ ಕ್ಷುದ್ರತೆಗಳನ್ನು ಹಾಯ್ದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಣದ ಮೂಲ ಪರಿಕಲ್ಪನೆಗಳು
Next post ನೆಲಮುಖಿ

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

cheap jordans|wholesale air max|wholesale jordans|wholesale jewelry|wholesale jerseys